ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಬೀಳುತ್ತಿರುವ ಜೋರು ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯು ಭರ್ತಿಯಾಗಿದೆ. ಹೀಗಾಗಿ ನದಿಪಾತ್ರದಲ್ಲಿ ಪ್ರವಾಹದ ಭೀತಿ ಇನ್ನಷ್ಟು ಹೆಚ್ಚಾಗಿದ್ದು, ಆತಂಕ ಮನೆ ಮಾಡಿದೆ.
ಕೊಡಗಿನ ಇರ್ಪುವಿನಲ್ಲಿ ಹುಟ್ಟಿ ನಾಗರಹೊಳೆ ಉದ್ಯಾನದೊಳಗಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿಗೆ ನೀರಿನ ಹರಿವು ದಿನೇ ದಿನೇ ಹೆಚ್ಚುತ್ತಿದೆ. ಹಿನ್ನೆಲೆ ತಾಲೂಕಿನ ಅಣೆಕಟ್ಟು ಮೇಲೆ ನೀರು ಹರಿಯಲಾರಂಭಿಸಿವೆ.
ಹೀಗಾಗಿ ತಾಲೂಕಿನ ಜೀವನದಿ ಲಕ್ಷ್ಮಣತೀರ್ಥ ನದಿ ಪಾತ್ರದಲ್ಲಿ ರೆಟ್ ಅಲರ್ಟ್ ಘೋಷಿಸಿದ್ದು, ನದಿ ಅಂಚಿನ ಗ್ರಾಮಸ್ಥರಿಗೆ ಕಾಳಜಿ ಕೇಂದ್ರಕ್ಕೆ ತೆರಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕೊಡಗು ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಡಿಕೇರಿಯ ಜಲಾಶಯಗಳು ತುಂಬಿ ಹೋಗಿವೆ.
ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಕಬಿನಿ ಹಾಗೂ ಕಾವೇರಿ ಜಲಾಶಯಗಳಿಗೆ ನೀರಿನ ಒಳಹರಿವಿನ ಪ್ರಮಾಣವೂ ಹೆಚ್ಚಿದೆ. ಕೆಆರ್ಎಸ್ ನಿಂದ ಬುಧವಾರ ರಾತ್ರಿ ೧.೭೨ ಲಕ್ಷ ಕ್ಯೂಸೆಕ್ಸ್ನಷ್ಟು ನೀರನ್ನು ಹೊರಬಿಡಾಗಿದೆ. ಇದರಿಂದ ಐತಿಹಾಸಿಕ ಶ್ರೀರಂಗಪಟ್ಟಣ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ.
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…