ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಬೀಳುತ್ತಿರುವ ಜೋರು ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯು ಭರ್ತಿಯಾಗಿದೆ. ಹೀಗಾಗಿ ನದಿಪಾತ್ರದಲ್ಲಿ ಪ್ರವಾಹದ ಭೀತಿ ಇನ್ನಷ್ಟು ಹೆಚ್ಚಾಗಿದ್ದು, ಆತಂಕ ಮನೆ ಮಾಡಿದೆ.
ಕೊಡಗಿನ ಇರ್ಪುವಿನಲ್ಲಿ ಹುಟ್ಟಿ ನಾಗರಹೊಳೆ ಉದ್ಯಾನದೊಳಗಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿಗೆ ನೀರಿನ ಹರಿವು ದಿನೇ ದಿನೇ ಹೆಚ್ಚುತ್ತಿದೆ. ಹಿನ್ನೆಲೆ ತಾಲೂಕಿನ ಅಣೆಕಟ್ಟು ಮೇಲೆ ನೀರು ಹರಿಯಲಾರಂಭಿಸಿವೆ.
ಹೀಗಾಗಿ ತಾಲೂಕಿನ ಜೀವನದಿ ಲಕ್ಷ್ಮಣತೀರ್ಥ ನದಿ ಪಾತ್ರದಲ್ಲಿ ರೆಟ್ ಅಲರ್ಟ್ ಘೋಷಿಸಿದ್ದು, ನದಿ ಅಂಚಿನ ಗ್ರಾಮಸ್ಥರಿಗೆ ಕಾಳಜಿ ಕೇಂದ್ರಕ್ಕೆ ತೆರಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕೊಡಗು ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಡಿಕೇರಿಯ ಜಲಾಶಯಗಳು ತುಂಬಿ ಹೋಗಿವೆ.
ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಕಬಿನಿ ಹಾಗೂ ಕಾವೇರಿ ಜಲಾಶಯಗಳಿಗೆ ನೀರಿನ ಒಳಹರಿವಿನ ಪ್ರಮಾಣವೂ ಹೆಚ್ಚಿದೆ. ಕೆಆರ್ಎಸ್ ನಿಂದ ಬುಧವಾರ ರಾತ್ರಿ ೧.೭೨ ಲಕ್ಷ ಕ್ಯೂಸೆಕ್ಸ್ನಷ್ಟು ನೀರನ್ನು ಹೊರಬಿಡಾಗಿದೆ. ಇದರಿಂದ ಐತಿಹಾಸಿಕ ಶ್ರೀರಂಗಪಟ್ಟಣ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ.
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…