ಮೈಸೂರು

ಹುಣಸೂರು | ಆತಂಕ ಸೃಷ್ಟಿಸಿದ್ದ ಹುಲಿ ಸೆರೆ ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹುಣಸೂರು : ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿ ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಗುರುವಾರ ತಡರಾತ್ರಿ ಸೆರೆ ಸಿಕ್ಕಿದೆ.

ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರಿಂದ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯು, ತಡರಾತ್ರಿ ತಾಯಿ ಹುಲಿ ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಮರಿ ಹುಲಿಗಳಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.

ಇದನ್ನು ಓದಿ: ಹುಲಿಯ ಡಿಎನ್ಎ ಪರೀಕ್ಷೆಗೂ ನೆರೆ ರಾಜ್ಯದ ಆಶ್ರಯ

ಗ್ರಾಮದ ಹೊರವಲಯದ ಹೊಲದ ಮಧ್ಯದಲ್ಲಿ ಅಡಗಿ ಕುಳಿತಿದ್ದ ಹುಲಿಗೆ ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲು ಅರಣ್ಯ ಇಲಾಖೆ ಚಿಂತಿಸಿದೆ. ಮರಿ ಹುಲಿಗಳಿರುವ ಸಾಧ್ಯತೆ ಹಿನ್ನೆಲೆಯಲ್ಲಿ ನಾಲ್ಕು ಆನೆಗಳೊಂದಿಗೆ ಅರಣ್ಯ ಇಲಾಖೆಯ ಟಾಸ್ಕ್ ಪೋರ್ಸ್ ಸಿಬ್ಬಂದಿಯಿಂದ ಕಾರ್ಯಾಚರಣೆ ಮುಂದುವರೆಸಿದೆ.

ಇಬ್ಬರ ಮೇಲೆ ದಾಳಿಗೆ ಯತ್ನ
ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರ ಮೇಲೆ ಹುಲಿ ದಾಳಿಗೆ ಯತ್ನಿಸಿತ್ತು. ಗೌಡನಕಟ್ಟೆಯ ರೈತ ಪ್ರಕಾಶ್ ಹಾಗೂ ಸ್ವಾಮಿ ಹುಲಿಯಿಂದ ಪಾರಾಗಿದ್ದರು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳಿಗೆ ರೈತರು ಹುಲಿ ಹಿಡಿಯಲೇಬೇಕೆಂದು ಒತ್ತಾಯಿಸಿ ಮುತ್ತಿಗೆ ಹಾಕಿದ್ದರು. ಅಲ್ಲದೇ ಗ್ರಾಮಸ್ಥರು ಸ್ಥಳದಲ್ಲೇ ಬೀಡು ಬಿಟ್ಟಿದ್ದರು.

ಪ್ರಕಾಶ್ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆಗೆ ಗುರುವಾರ ಬೆಳಗ್ಗೆ ಸ್ನೇಹಿತ ಸ್ವಾಮಿಯವರೊಂದಿಗೆ ರಸಗೊಬ್ಬರ ಹಾಕುತ್ತಿದ್ದರು. ಈ ವೇಳೆ ಹುಲಿಯು ಜೋಳದ ಹೊಲದಿಂದ ಹೊರ ಬಂದಿದ್ದು, ರೈತರಿಬ್ಬರೂ ಜೋರಾಗಿ ಕಿರುಚಿಕೊಂಡಿದ್ದರು. ಅಕ್ಕಪಕ್ಕದಲ್ಲಿದ್ದ ರೈತರು ಸಹ ಜೋರಾಗಿ ಕೂಗಿದ್ದರಿಂದ ಹುಲಿ ಹೆದರಿ ಓಡಿ ಹೋಗಿತ್ತು. ರೈತರಿಬ್ಬರು ಬಚಾವಾಗಿದ್ದರು.

ಆಂದೋಲನ ಡೆಸ್ಕ್

Recent Posts

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

8 mins ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

21 mins ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

28 mins ago

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

53 mins ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

60 mins ago

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…

1 hour ago