Mysore
24
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಹುಣಸೂರು| ಜಮೀನಿಗೆ ಹೋದಾಗ ದುರಂತ: ವಿದ್ಯುತ್‌ ತಂತಿ ತುಳಿದು ತಾಯಿ, ಮಗ ಸಾವು

ಮೈಸೂರು: ವಿದ್ಯುತ್‌ ತಂತಿ ತುಳಿದು ತಾಯಿ, ಮಗ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

50 ವರ್ಷದ ನೀಲಮ್ಮ ಹಾಗೂ 19 ವರ್ಷದ ಹರೀಶ್‌ ಮೃತಪಟ್ಟರವರು. ಎಮ್ಮೆಕೊಪ್ಪಲು ಗ್ರಾಮದ ಬಳಿ ಜಮೀನಿನ ಕೆಲಸಕ್ಕೆ ತೆರಳಿದ್ದ ವೇಳೆ ವಿದ್ಯುತ್‌ ಕಂಬದಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೊದಲು ತಾಯಿ ನೀಲಮ್ಮ ಅವರಿಗೆ ವಿದ್ಯುತ್‌ ತಗುಲಿದೆ. ತಾಯಿ ರಕ್ಷಣೆ ಮಾಡಲು ಹೋದ ಮಗ ಕೂಡ ಬಲಿಯಾಗಿದ್ದಾನೆ. ಈ ಸಂಬಂಧ ಹುಣಸೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!