ಮೈಸೂರು

ಹುಣಸೂರು | ಬನ್ನಿಕುಪ್ಪೆಯಲ್ಲಿ ಅಸ್ಪೃಶ್ಯತಾ ನಿರ್ಮೂಲನೆ ಕಾರ್ಯಕ್ರಮ

ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದ ನಾಯಕ್, ಜ್ಞಾನಜ್ಯೋತಿ ಸಂಸ್ಥೆಯ ಕಾರ್ಯದರ್ಶಿ ಹೇಮಾವತಿ ಹಾಗೂ ಗಣ್ಯರು ಉದ್ಘಾಟಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಸಮಾಜ ಕಲ್ಯಾಣ ಅಧಿಕಾರಿ ಅಶೋಕ್ ಕುಮಾರ್, ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಅಸ್ಪೃಶ್ಯತೆ ನಿವಾರಣೆ ಆಗಿಲ್ಲ. ಸಾರ್ವಜನಿಕರಲ್ಲಿ ಅರಿವಿನ ಕೊರತೆ ಇದಕ್ಕೆ ಕಾರಣವಾಗಿದೆ. ಆದ್ದರಿಂದ ಹಿಂದುಳಿದ ವರ್ಗದವರು ಉತ್ತಮ ಶಿಕ್ಷಣವನ್ನು ಪಡೆದು ಜ್ಞಾನವನ್ನು ಹೆಚ್ಚಿಸಿಕೊಂಡು ಸಮಾಜದಲ್ಲಿ ಮಾದರಿ ಪ್ರಜೆಗಳಾಗಿ ಬದುಕಬೇಕು ಎಂದು ಸಲಹೆ ನೀಡಿದರು.

ದಸಂಸ ಮುಖಂಡ ನಿಂಗರಾಜ್ ಮಲ್ಲಾಡಿ ಮಾತನಾಡಿ, ಅಸ್ಪೃಶ್ಯತೆ ಎಂಬುದು ಅನಿಷ್ಟ ಪದ್ಧತಿ, ಮನುಕುಲಕ್ಕೆ ಸವಲಾಗಿ ನಿಂತಿದೆ. ಬುದ್ಧ, ಬಸವ, ಕನಕದಾಸರು, ಅಂಬೇಡ್ಕರ್ ಅವರು ಹೋರಾಟಗಳ ಮೂಲಕ ಸಮಾಜದ ಅಂಕು ಡೊಂಕುಗಳಿಗೆ ಕಾಯಕಲ್ಪ ನೀಡಲು ಶ್ರಮಿಸಿದರು. ಅಸ್ಪೃಶ್ಯತೆಯನ್ನು ಹೋಗಲಾಡಿಸುವುದು ಕಷ್ಟ ಸಾಧ್ಯ ಎನ್ನುವ ಪರಿಸ್ಥಿತಿ ಇದೆ. ಜಾತಿ-ಜಾತಿಗಳ ನಡುವಿನ ಸಂಘರ್ಷ ಮರೆಯಾಗಬೇಕು ಎಂದು ಹೇಳಿದರು.

ಮಾನವ ಹಕ್ಕುಗಳ ಬಗ್ಗೆ ಶೇಷಾದ್ರಿ ಮಾಹಿತಿ ನೀಡಿದರು. ತಾ.ಪಂ. ಇಒ ಹೊಂಗಯ್ಯ ಮಾತನಾಡಿ, ಅಸ್ಪೃಶ್ಯತೆ ಎನ್ನುವುದು ಗುಪ್ತಗಾಮಿನಿಯಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಜೀವಂತವಾಗಿದೆ. ಎಲ್ಲ ಕೋಮಿನ ಜನರು ಅಣ್ಣತಮ್ಮಂದಿರಂತೆ ಬದುಕಬೇಕಾದರೆ ಎಲ್ಲರಲ್ಲೂ ಮಾನವೀಯ ಗುಣಗಳು ಇರಬೇಕು ಎಂದು ತಿಳಿಸಿದರು.

ಕಾರ್ಯದರ್ಶಿ ಹೇಮಾವತಿ ಮಾತನಾಡಿ, ಜೀವನದಲ್ಲಿ ಗುರಿ ಹೊಂದಲು ಪ್ರಜ್ಞೆ, ಪ್ರತಿಜ್ಞೆ, ಗುರಿ ಇವು ಮುಖ್ಯ, ಮಾನವ ಅಭಿವೃದ್ಧಿ ಹೊಂದಬೇಕಾದರೆ ಮುಖ್ಯವಾಗಿ ಶಿಕ್ಷಣವನ್ನು ಪಡೆಯಬೇಕು,ಪರಸ್ಪರ ಸಹ ಬಾಳ್ವೆ ,ಸಹಭಾಗಿತ್ವ ,ಸೇವಾ ಮನೋಭಾವನೆ ಬೆಳೆಸಿಕೊಂಡು ಸಮಾಜಕ್ಕಾಗಿ ಶ್ರಮಿಸಬೇಕು ಎಂದರು.

ಮಾನವ ಹಕ್ಕುಗಳ ಕಾರ್ಯಕರ್ತರಾದ ಗುರುಪ್ರಸಾದ್, ಗ್ರಾ.ಪಂ. ಅಧ್ಯಕ್ಷ ಗೋವಿಂದ ನಾಯಕ್, ತಾ.ಪಂ ಮಾಜಿ ಸದಸ್ಯ ಪ್ರಸನ್ನ ಕುಮಾರ್, ಪಿಡಿಓ ರಾಘವೇಂದ್ರ ಪ್ರಸನ್ನ, ಕಾರ್ಯದರ್ಶಿ ವೇದಮೂರ್ತಿ, ಸದಸ್ಯರಾದ ನಿಂಗೇಗೌಡ, ಪರಶುರಾಮ್, ಲೋಕೇಶ್, ಚಂದ್ರಶೇಖರ್, ಮುಖಂಡರಾದ ಕೂಸಪ್ಪ , ವಕೀಲ ಪುಟ್ಟರಾಜು, ಡಾ. ಪವಿತ್ರ ಕೃಷ್ಣ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸುತ್ತಮುತ್ತಲ ೭ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿ, ಮಹಿಳಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಬೆಳಕು ಕಲಾತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಏಪ್ರಿಲ್.16ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.‌16ರಂದು ಕರೆಯಲಾಗಿದೆ. ಏಪ್ರಿಲ್.‌16ರ ಸಂಜೆ 4.30ಕ್ಕೆ ವಿಧಾನಸೌಧದ…

5 mins ago

ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಸಿದು ಹೋಗಿವೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌…

26 mins ago

10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌-2 ಗಗನಯಾತ್ರಿಗಳು

ವಾಷಿಂಗ್ಟನ್ : ನಾಸಾದ ಐತಿಹಾಸಿಕ ಆರ್ಟೆಮಿಸ್‌-2 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರನನ್ನು ಸುತ್ತುವಳಿ ಮಾಡಿ ಭೂಮಿಗೆ ವಾಪಸಾಗುವ ಮೊದಲ ಕ್ರೂಡ್…

30 mins ago

ಅಮೆರಿಕ-ಇರಾನ್‌ ಕದನ ವಿರಾಮ | ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…

2 hours ago

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಎಇಇ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…

2 hours ago

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

4 hours ago