ಮೈಸೂರು

ಹುಣಸೂರು | ಬನ್ನಿಕುಪ್ಪೆಯಲ್ಲಿ ಅಸ್ಪೃಶ್ಯತಾ ನಿರ್ಮೂಲನೆ ಕಾರ್ಯಕ್ರಮ

ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದ ನಾಯಕ್, ಜ್ಞಾನಜ್ಯೋತಿ ಸಂಸ್ಥೆಯ ಕಾರ್ಯದರ್ಶಿ ಹೇಮಾವತಿ ಹಾಗೂ ಗಣ್ಯರು ಉದ್ಘಾಟಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಸಮಾಜ ಕಲ್ಯಾಣ ಅಧಿಕಾರಿ ಅಶೋಕ್ ಕುಮಾರ್, ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಅಸ್ಪೃಶ್ಯತೆ ನಿವಾರಣೆ ಆಗಿಲ್ಲ. ಸಾರ್ವಜನಿಕರಲ್ಲಿ ಅರಿವಿನ ಕೊರತೆ ಇದಕ್ಕೆ ಕಾರಣವಾಗಿದೆ. ಆದ್ದರಿಂದ ಹಿಂದುಳಿದ ವರ್ಗದವರು ಉತ್ತಮ ಶಿಕ್ಷಣವನ್ನು ಪಡೆದು ಜ್ಞಾನವನ್ನು ಹೆಚ್ಚಿಸಿಕೊಂಡು ಸಮಾಜದಲ್ಲಿ ಮಾದರಿ ಪ್ರಜೆಗಳಾಗಿ ಬದುಕಬೇಕು ಎಂದು ಸಲಹೆ ನೀಡಿದರು.

ದಸಂಸ ಮುಖಂಡ ನಿಂಗರಾಜ್ ಮಲ್ಲಾಡಿ ಮಾತನಾಡಿ, ಅಸ್ಪೃಶ್ಯತೆ ಎಂಬುದು ಅನಿಷ್ಟ ಪದ್ಧತಿ, ಮನುಕುಲಕ್ಕೆ ಸವಲಾಗಿ ನಿಂತಿದೆ. ಬುದ್ಧ, ಬಸವ, ಕನಕದಾಸರು, ಅಂಬೇಡ್ಕರ್ ಅವರು ಹೋರಾಟಗಳ ಮೂಲಕ ಸಮಾಜದ ಅಂಕು ಡೊಂಕುಗಳಿಗೆ ಕಾಯಕಲ್ಪ ನೀಡಲು ಶ್ರಮಿಸಿದರು. ಅಸ್ಪೃಶ್ಯತೆಯನ್ನು ಹೋಗಲಾಡಿಸುವುದು ಕಷ್ಟ ಸಾಧ್ಯ ಎನ್ನುವ ಪರಿಸ್ಥಿತಿ ಇದೆ. ಜಾತಿ-ಜಾತಿಗಳ ನಡುವಿನ ಸಂಘರ್ಷ ಮರೆಯಾಗಬೇಕು ಎಂದು ಹೇಳಿದರು.

ಮಾನವ ಹಕ್ಕುಗಳ ಬಗ್ಗೆ ಶೇಷಾದ್ರಿ ಮಾಹಿತಿ ನೀಡಿದರು. ತಾ.ಪಂ. ಇಒ ಹೊಂಗಯ್ಯ ಮಾತನಾಡಿ, ಅಸ್ಪೃಶ್ಯತೆ ಎನ್ನುವುದು ಗುಪ್ತಗಾಮಿನಿಯಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಜೀವಂತವಾಗಿದೆ. ಎಲ್ಲ ಕೋಮಿನ ಜನರು ಅಣ್ಣತಮ್ಮಂದಿರಂತೆ ಬದುಕಬೇಕಾದರೆ ಎಲ್ಲರಲ್ಲೂ ಮಾನವೀಯ ಗುಣಗಳು ಇರಬೇಕು ಎಂದು ತಿಳಿಸಿದರು.

ಕಾರ್ಯದರ್ಶಿ ಹೇಮಾವತಿ ಮಾತನಾಡಿ, ಜೀವನದಲ್ಲಿ ಗುರಿ ಹೊಂದಲು ಪ್ರಜ್ಞೆ, ಪ್ರತಿಜ್ಞೆ, ಗುರಿ ಇವು ಮುಖ್ಯ, ಮಾನವ ಅಭಿವೃದ್ಧಿ ಹೊಂದಬೇಕಾದರೆ ಮುಖ್ಯವಾಗಿ ಶಿಕ್ಷಣವನ್ನು ಪಡೆಯಬೇಕು,ಪರಸ್ಪರ ಸಹ ಬಾಳ್ವೆ ,ಸಹಭಾಗಿತ್ವ ,ಸೇವಾ ಮನೋಭಾವನೆ ಬೆಳೆಸಿಕೊಂಡು ಸಮಾಜಕ್ಕಾಗಿ ಶ್ರಮಿಸಬೇಕು ಎಂದರು.

ಮಾನವ ಹಕ್ಕುಗಳ ಕಾರ್ಯಕರ್ತರಾದ ಗುರುಪ್ರಸಾದ್, ಗ್ರಾ.ಪಂ. ಅಧ್ಯಕ್ಷ ಗೋವಿಂದ ನಾಯಕ್, ತಾ.ಪಂ ಮಾಜಿ ಸದಸ್ಯ ಪ್ರಸನ್ನ ಕುಮಾರ್, ಪಿಡಿಓ ರಾಘವೇಂದ್ರ ಪ್ರಸನ್ನ, ಕಾರ್ಯದರ್ಶಿ ವೇದಮೂರ್ತಿ, ಸದಸ್ಯರಾದ ನಿಂಗೇಗೌಡ, ಪರಶುರಾಮ್, ಲೋಕೇಶ್, ಚಂದ್ರಶೇಖರ್, ಮುಖಂಡರಾದ ಕೂಸಪ್ಪ , ವಕೀಲ ಪುಟ್ಟರಾಜು, ಡಾ. ಪವಿತ್ರ ಕೃಷ್ಣ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸುತ್ತಮುತ್ತಲ ೭ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿ, ಮಹಿಳಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಬೆಳಕು ಕಲಾತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

1 hour ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

1 hour ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

2 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

2 hours ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

2 hours ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

2 hours ago