ಮೈಸೂರು

ಹುಣಸೂರು | ಬನ್ನಿಕುಪ್ಪೆಯಲ್ಲಿ ಅಸ್ಪೃಶ್ಯತಾ ನಿರ್ಮೂಲನೆ ಕಾರ್ಯಕ್ರಮ

ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದ ನಾಯಕ್, ಜ್ಞಾನಜ್ಯೋತಿ ಸಂಸ್ಥೆಯ ಕಾರ್ಯದರ್ಶಿ ಹೇಮಾವತಿ ಹಾಗೂ ಗಣ್ಯರು ಉದ್ಘಾಟಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಸಮಾಜ ಕಲ್ಯಾಣ ಅಧಿಕಾರಿ ಅಶೋಕ್ ಕುಮಾರ್, ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಅಸ್ಪೃಶ್ಯತೆ ನಿವಾರಣೆ ಆಗಿಲ್ಲ. ಸಾರ್ವಜನಿಕರಲ್ಲಿ ಅರಿವಿನ ಕೊರತೆ ಇದಕ್ಕೆ ಕಾರಣವಾಗಿದೆ. ಆದ್ದರಿಂದ ಹಿಂದುಳಿದ ವರ್ಗದವರು ಉತ್ತಮ ಶಿಕ್ಷಣವನ್ನು ಪಡೆದು ಜ್ಞಾನವನ್ನು ಹೆಚ್ಚಿಸಿಕೊಂಡು ಸಮಾಜದಲ್ಲಿ ಮಾದರಿ ಪ್ರಜೆಗಳಾಗಿ ಬದುಕಬೇಕು ಎಂದು ಸಲಹೆ ನೀಡಿದರು.

ದಸಂಸ ಮುಖಂಡ ನಿಂಗರಾಜ್ ಮಲ್ಲಾಡಿ ಮಾತನಾಡಿ, ಅಸ್ಪೃಶ್ಯತೆ ಎಂಬುದು ಅನಿಷ್ಟ ಪದ್ಧತಿ, ಮನುಕುಲಕ್ಕೆ ಸವಲಾಗಿ ನಿಂತಿದೆ. ಬುದ್ಧ, ಬಸವ, ಕನಕದಾಸರು, ಅಂಬೇಡ್ಕರ್ ಅವರು ಹೋರಾಟಗಳ ಮೂಲಕ ಸಮಾಜದ ಅಂಕು ಡೊಂಕುಗಳಿಗೆ ಕಾಯಕಲ್ಪ ನೀಡಲು ಶ್ರಮಿಸಿದರು. ಅಸ್ಪೃಶ್ಯತೆಯನ್ನು ಹೋಗಲಾಡಿಸುವುದು ಕಷ್ಟ ಸಾಧ್ಯ ಎನ್ನುವ ಪರಿಸ್ಥಿತಿ ಇದೆ. ಜಾತಿ-ಜಾತಿಗಳ ನಡುವಿನ ಸಂಘರ್ಷ ಮರೆಯಾಗಬೇಕು ಎಂದು ಹೇಳಿದರು.

ಮಾನವ ಹಕ್ಕುಗಳ ಬಗ್ಗೆ ಶೇಷಾದ್ರಿ ಮಾಹಿತಿ ನೀಡಿದರು. ತಾ.ಪಂ. ಇಒ ಹೊಂಗಯ್ಯ ಮಾತನಾಡಿ, ಅಸ್ಪೃಶ್ಯತೆ ಎನ್ನುವುದು ಗುಪ್ತಗಾಮಿನಿಯಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಜೀವಂತವಾಗಿದೆ. ಎಲ್ಲ ಕೋಮಿನ ಜನರು ಅಣ್ಣತಮ್ಮಂದಿರಂತೆ ಬದುಕಬೇಕಾದರೆ ಎಲ್ಲರಲ್ಲೂ ಮಾನವೀಯ ಗುಣಗಳು ಇರಬೇಕು ಎಂದು ತಿಳಿಸಿದರು.

ಕಾರ್ಯದರ್ಶಿ ಹೇಮಾವತಿ ಮಾತನಾಡಿ, ಜೀವನದಲ್ಲಿ ಗುರಿ ಹೊಂದಲು ಪ್ರಜ್ಞೆ, ಪ್ರತಿಜ್ಞೆ, ಗುರಿ ಇವು ಮುಖ್ಯ, ಮಾನವ ಅಭಿವೃದ್ಧಿ ಹೊಂದಬೇಕಾದರೆ ಮುಖ್ಯವಾಗಿ ಶಿಕ್ಷಣವನ್ನು ಪಡೆಯಬೇಕು,ಪರಸ್ಪರ ಸಹ ಬಾಳ್ವೆ ,ಸಹಭಾಗಿತ್ವ ,ಸೇವಾ ಮನೋಭಾವನೆ ಬೆಳೆಸಿಕೊಂಡು ಸಮಾಜಕ್ಕಾಗಿ ಶ್ರಮಿಸಬೇಕು ಎಂದರು.

ಮಾನವ ಹಕ್ಕುಗಳ ಕಾರ್ಯಕರ್ತರಾದ ಗುರುಪ್ರಸಾದ್, ಗ್ರಾ.ಪಂ. ಅಧ್ಯಕ್ಷ ಗೋವಿಂದ ನಾಯಕ್, ತಾ.ಪಂ ಮಾಜಿ ಸದಸ್ಯ ಪ್ರಸನ್ನ ಕುಮಾರ್, ಪಿಡಿಓ ರಾಘವೇಂದ್ರ ಪ್ರಸನ್ನ, ಕಾರ್ಯದರ್ಶಿ ವೇದಮೂರ್ತಿ, ಸದಸ್ಯರಾದ ನಿಂಗೇಗೌಡ, ಪರಶುರಾಮ್, ಲೋಕೇಶ್, ಚಂದ್ರಶೇಖರ್, ಮುಖಂಡರಾದ ಕೂಸಪ್ಪ , ವಕೀಲ ಪುಟ್ಟರಾಜು, ಡಾ. ಪವಿತ್ರ ಕೃಷ್ಣ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸುತ್ತಮುತ್ತಲ ೭ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿ, ಮಹಿಳಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಬೆಳಕು ಕಲಾತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago