ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆಯೊಂದು ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಟ ನಡೆಸಿದೆ.
ರೈತರ ಜಮೀನಿನಲ್ಲಿ ಹೊಟ್ಟೆ ತುಂಬಾ ಮೇವು ತಿಂದಿದ್ದ ಕಾಡಾನೆಯು ರೈತರ ಕೂಗಾಟ, ಚೀರಾಟ, ವಾಹನ ಶಬ್ಧಕ್ಕೆ ಹೆದರಿತು. ಕಾಡಿನಿಂದ ಹೊರ ಬಂದು ವಾಪಸ್ ಕಾಡಿಗೆ ಹೋಗೋ ವೇಳೆ ರೈಲ್ವೆ ಬ್ಯಾರಿಕೇಡ್ನಲ್ಲಿ ಲಾಕ್ ಆದ ಆನೆಯು, ತಡೆಗೋಡೆ ಅಡಿಯಿಂದ ನುಸುಳಲು ಯತ್ನಿಸಿ ಸಿಲುಕಿ ಪರದಾಡಿತು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಬ್ಯಾರಿಕೇಡ್ ತೆರವುಗೊಳಿಸಿ ಆನೆಯನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…