ಮೈಸೂರು

ಹುಣಸೂರು | ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿಪಂ CEO ಗಾಯಿತ್ರಿ ಭೇಟಿ

ಹುಣಸೂರು: ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಭೇಟಿ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಡಳಿತ ವ್ಯವಸ್ಥೆ ಕುರಿತು ಜನಪ್ರತಿನಿಧಿಗಳು ಹಾಗೂ ಪಿಡಿಒ ಅವರೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಕುರಿತಂತೆ ಚರ್ಚಿಸಿದರು.

ಗ್ರಾಮ ಪಂಚಾಯಿತಿ ಕಟ್ಟಡಗಳ ಉನ್ನತೀಕರಣಕ್ಕಾಗಿ ಸರ್ಕಾರ ಸಾಕಷ್ಟು ಸಹಾಯ ನೀಡುತ್ತಿದ್ದರೂ ಇಂದಿಗೂ ಸಣ್ಣ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯವಸ್ಥೆ ನೋಡಿ  ಬೇಸರ ವ್ಯಕ್ತಪಡಿಸಿದರು.

ಇಂದಿಗೂ ಅರಸು ಅವರ ಜಾಗದಲ್ಲಿ ಪಂಚಾಯಿತಿ ಕಾರ್ಯಕಲಾಪಗಳು ನಡೆಯುತ್ತಿದ್ದು, ಸರ್ಕಾರದ ಜಾಗದಲ್ಲಿ ಸ್ವಂತ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಹಣದ ಲಭ್ಯತೆ ಇದ್ದರೂ, ಸ್ವಂತ ಕಟ್ಟಡ ಮತ್ತು ಬಾಪೂಜಿ ಸೇವಾ ಕೇಂದ್ರ ವ್ಯವಸ್ಥೆ ಸರಿಯಾದ ವ್ಯವಸ್ಥೆ ಇರುವುದಿಲ್ಲ. ಹಾಗಾಗಿ ಇರುವ ಅಡೆತಡೆಗಳನ್ನು ನಿವಾರಿಸಲು ಗ್ರಾಮದ ಮುಖಂಡರು, ಜನಪ್ರತಿನಿಧಿಗಳು ಸಭೆ ನಡೆಸುವ ಮೂಲಕ ಒಮ್ಮತದ ನಿರ್ಧಾರದೊಂದಿಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕೆಂದು ಸಲಹೆ ನೀಡಿದರು.

ಜನರೇ ಗ್ರಾಮದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದು, ಪಂಚಾಯಿತಿಗಳಲ್ಲಿರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ, ಗ್ರಾಮದ ಸುಸ್ಥಿರ ಅಭಿವೃದ್ಧಿಗಾಗಿ ಶ್ರಮಿಸುವುದು ಜನಪ್ರತಿನಿಧಿಗಳ ಜವಾಬ್ದಾರಿ ಮತ್ತು ಕರ್ತವ್ಯವಾಗಿರುತ್ತದೆ. ಹಾಗಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸೇವೆಗೆ ಯಾವುದೇ ತೊಂದರೆಯಾಗದಂತೆ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಿಕೊಂಡು ಹೋಗಬೇಕಾಗಿ ನಿರ್ದೇಶಿಸಿದರು.

ಇನ್ನು ಶಾಲಾ ಮಕ್ಕಳಿಗೆ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ಸದಸ್ಯರೆಲ್ಲರೂ ಮನವಿ ಮಾಡಿದ ಹಿನ್ನೆಲೆ, ಸ್ಥಳದಲ್ಲೇ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಿದರು.

ಮ-ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಹಾಗೂ ಚರಂಡಿ ನೀರು ನೇರ ಕೆರೆಗೆ ಹರಿದು ಹೋಗುವುದನ್ನು ತಪ್ಪಿಸಲು ಸಮುದಾಯ ಬಚ್ಚಲುಗುಂಡಿ ನಿರ್ಮಾಣಕ್ಕೆ ಮುಂದಾಗಬೇಕು. ಸಂಜೀವಿನಿ ಒಕ್ಕೂಟದಡಿ ಮಹಿಳೆಯರು ತಮ್ಮ ಸ್ವಾವಲಂಬಿ ಜೀವನ ನಿರ್ಮಿಸಿಕೊಳ್ಳುವುದಕ್ಕೆ ಸಂಜೀವಿನಿ ಶೆಡ್ ನಿರ್ಮಾಣ ಹಾಗೂ ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಬದಲು ಘನ ತ್ಯಾಜ್ಯ ವಿಲೇವಾರಿ ನಿರ್ಮಾಣ ಮಾಡಿಕೊಂಡು ಸಮರ್ಪಕವಾಗಿ ಕಸ ವಿಲೇವಾರಿ ಮಾಡಲು ಸೂಕ್ತ ಜಾಗ ಗುರುತಿಸಿ ಕ್ರಮ ವಹಿಸಲು ಪಿಡಿಒ ಅವರಿಗೆ ಸೂಚಿಸಿದರು.

ಬಳಿಕ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಉದ್ಯಾನವನ, ಪೌಷ್ಠಿಕ ಕೈ ತೋಟ ನಿರ್ಮಾಣ ಮಾಡಿಕೊಳ್ಳಲು ಕ್ರಿಯಾ ಯೋಜನೆಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ತಿಳಿಸಿದರು.

ಗ್ರಾಮದ ವ್ಯಾಪ್ತಿಯಲ್ಲಿ ಜಾನುವಾರು ಕೊಟ್ಟಿಗೆ ಹಾಗೂ ಜಮೀನುಗಳಿಗೆ ತೆರಳಲು ಸೂಕ್ತ ದಾರಿ ಮಾಡಿಕೊಡಬೇಕಾಗಿ ಜನಪ್ರತಿನಿಧಿಗಳು ಕೇಳಿದ ಮನವಿಗೆ ಸ್ಪಂದಿಸಿ, ನರೇಗಾ ಯೋಜನೆಯಡಿ 60:40 ಅನುಪಾತ ಅವಶ್ಯಕವಿದ್ದು, ಈ ಅನುಪಾತ ಮೀರದಂತೆ ಕಾಮಗಾರಿ ಕೈಗೊಳ್ಳಿರಿ ಎಂದು ಸಲಹೆ ನೀಡಿದರು.

ಜೊತೆಗೆ ಪಿ.ಆರ್.ಇ.ಡಿ ಇಲಾಖೆ ಅವರಿಗೆ ಸೂಕ್ತವಾದ ಜಾಗದಲ್ಲಿ ಸಮರ್ಪಕವಾದ ರಸ್ತೆ ಕಲ್ಪಿಸಿಕೊಡುವಂತೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.

ವಸತಿ ಯೋಜನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಯವರಿಂದ ಮಾಹಿತಿ ಪಡೆದುಕೊಂಡಿದ್ದು, ಇರುವ ತಾಂತ್ರಿಕ ಸಮಸ್ಯೆ ಕುರಿತು ಆಲಿಸಿದರು. ಹೊಸದಾಗಿ ತೆಗೆದುಕೊಂಡಿರುವ ಮನೆಗಳ ಕುರಿತು ತಾಂತ್ರಿಕವಾಗಿ ಆಗಿರುವಂತಹ ಸಮಸ್ಯೆಗಳ ಕುರಿತು ಪರಿಹರಿಸುವಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಬಳಿಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಂಗಳೂರು ಮಾಳ ಗ್ರಾಮ ಮತ್ತು ಬಿಜಾಪುರ ಕಾಲೋನಿಯಲ್ಲಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ, ಅಲ್ಲಿನ ಸ್ಥಳೀಯರೊಂದಿಗೆ ಗ್ರಾಮದಲ್ಲಿರುವಂತಹ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರಕ್ಕೆ ಸೂಚಿಸಿದರು.

ಈ ವೇಳೆ ನರೇಗಾದಿಂದ ಚರಂಡಿ ವ್ಯವಸ್ಥೆ, ಮಕ್ಕಳ ಲಾಲನೆ ಪಾಲನೆಗೆ ಅವಶ್ಯಕ ಅಂಗನವಾಡಿ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಮಕ್ಕಳ ಕಲಿಕೆಗೆ ಅಡಚಣೆಯಾಗುತ್ತಿರುವುದನ್ನು ಮನಗಂಡು ಬಿಜಾಪುರ ಕಾಲೋನಿಯಲ್ಲಿರುವ ಸರ್ಕಾರಿ ಶಾಲಾ ಆವರಣದಲ್ಲಿರುವ ಒಂದು ಕೊಠಡಿಯನ್ನು ಕಂಡು ಕಾಮಗಾರಿ ಪೂರ್ಣಗೊಳ್ಳುವವರೆಗೆ ಹತ್ತಿರದಲ್ಲಿರುವ ಶಾಲೆಯಲ್ಲಿ ಅಂಗನವಾಡಿ ನಡೆಸುವಂತೆ ಮುಖ್ಯೋಪಾಧ್ಯಾರಿಗೆ ಸೂಚಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

6 mins ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

22 mins ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

54 mins ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

1 hour ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

1 hour ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

2 hours ago