ಮೈಸೂರು

ಹುಣಸೂರು | ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿಪಂ CEO ಗಾಯಿತ್ರಿ ಭೇಟಿ

ಹುಣಸೂರು: ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಭೇಟಿ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಡಳಿತ ವ್ಯವಸ್ಥೆ ಕುರಿತು ಜನಪ್ರತಿನಿಧಿಗಳು ಹಾಗೂ ಪಿಡಿಒ ಅವರೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಕುರಿತಂತೆ ಚರ್ಚಿಸಿದರು.

ಗ್ರಾಮ ಪಂಚಾಯಿತಿ ಕಟ್ಟಡಗಳ ಉನ್ನತೀಕರಣಕ್ಕಾಗಿ ಸರ್ಕಾರ ಸಾಕಷ್ಟು ಸಹಾಯ ನೀಡುತ್ತಿದ್ದರೂ ಇಂದಿಗೂ ಸಣ್ಣ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯವಸ್ಥೆ ನೋಡಿ  ಬೇಸರ ವ್ಯಕ್ತಪಡಿಸಿದರು.

ಇಂದಿಗೂ ಅರಸು ಅವರ ಜಾಗದಲ್ಲಿ ಪಂಚಾಯಿತಿ ಕಾರ್ಯಕಲಾಪಗಳು ನಡೆಯುತ್ತಿದ್ದು, ಸರ್ಕಾರದ ಜಾಗದಲ್ಲಿ ಸ್ವಂತ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಹಣದ ಲಭ್ಯತೆ ಇದ್ದರೂ, ಸ್ವಂತ ಕಟ್ಟಡ ಮತ್ತು ಬಾಪೂಜಿ ಸೇವಾ ಕೇಂದ್ರ ವ್ಯವಸ್ಥೆ ಸರಿಯಾದ ವ್ಯವಸ್ಥೆ ಇರುವುದಿಲ್ಲ. ಹಾಗಾಗಿ ಇರುವ ಅಡೆತಡೆಗಳನ್ನು ನಿವಾರಿಸಲು ಗ್ರಾಮದ ಮುಖಂಡರು, ಜನಪ್ರತಿನಿಧಿಗಳು ಸಭೆ ನಡೆಸುವ ಮೂಲಕ ಒಮ್ಮತದ ನಿರ್ಧಾರದೊಂದಿಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕೆಂದು ಸಲಹೆ ನೀಡಿದರು.

ಜನರೇ ಗ್ರಾಮದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದ್ದು, ಪಂಚಾಯಿತಿಗಳಲ್ಲಿರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ, ಗ್ರಾಮದ ಸುಸ್ಥಿರ ಅಭಿವೃದ್ಧಿಗಾಗಿ ಶ್ರಮಿಸುವುದು ಜನಪ್ರತಿನಿಧಿಗಳ ಜವಾಬ್ದಾರಿ ಮತ್ತು ಕರ್ತವ್ಯವಾಗಿರುತ್ತದೆ. ಹಾಗಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸೇವೆಗೆ ಯಾವುದೇ ತೊಂದರೆಯಾಗದಂತೆ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಿಕೊಂಡು ಹೋಗಬೇಕಾಗಿ ನಿರ್ದೇಶಿಸಿದರು.

ಇನ್ನು ಶಾಲಾ ಮಕ್ಕಳಿಗೆ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ಸದಸ್ಯರೆಲ್ಲರೂ ಮನವಿ ಮಾಡಿದ ಹಿನ್ನೆಲೆ, ಸ್ಥಳದಲ್ಲೇ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಿದರು.

ಮ-ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಹಾಗೂ ಚರಂಡಿ ನೀರು ನೇರ ಕೆರೆಗೆ ಹರಿದು ಹೋಗುವುದನ್ನು ತಪ್ಪಿಸಲು ಸಮುದಾಯ ಬಚ್ಚಲುಗುಂಡಿ ನಿರ್ಮಾಣಕ್ಕೆ ಮುಂದಾಗಬೇಕು. ಸಂಜೀವಿನಿ ಒಕ್ಕೂಟದಡಿ ಮಹಿಳೆಯರು ತಮ್ಮ ಸ್ವಾವಲಂಬಿ ಜೀವನ ನಿರ್ಮಿಸಿಕೊಳ್ಳುವುದಕ್ಕೆ ಸಂಜೀವಿನಿ ಶೆಡ್ ನಿರ್ಮಾಣ ಹಾಗೂ ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಬದಲು ಘನ ತ್ಯಾಜ್ಯ ವಿಲೇವಾರಿ ನಿರ್ಮಾಣ ಮಾಡಿಕೊಂಡು ಸಮರ್ಪಕವಾಗಿ ಕಸ ವಿಲೇವಾರಿ ಮಾಡಲು ಸೂಕ್ತ ಜಾಗ ಗುರುತಿಸಿ ಕ್ರಮ ವಹಿಸಲು ಪಿಡಿಒ ಅವರಿಗೆ ಸೂಚಿಸಿದರು.

ಬಳಿಕ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಉದ್ಯಾನವನ, ಪೌಷ್ಠಿಕ ಕೈ ತೋಟ ನಿರ್ಮಾಣ ಮಾಡಿಕೊಳ್ಳಲು ಕ್ರಿಯಾ ಯೋಜನೆಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ತಿಳಿಸಿದರು.

ಗ್ರಾಮದ ವ್ಯಾಪ್ತಿಯಲ್ಲಿ ಜಾನುವಾರು ಕೊಟ್ಟಿಗೆ ಹಾಗೂ ಜಮೀನುಗಳಿಗೆ ತೆರಳಲು ಸೂಕ್ತ ದಾರಿ ಮಾಡಿಕೊಡಬೇಕಾಗಿ ಜನಪ್ರತಿನಿಧಿಗಳು ಕೇಳಿದ ಮನವಿಗೆ ಸ್ಪಂದಿಸಿ, ನರೇಗಾ ಯೋಜನೆಯಡಿ 60:40 ಅನುಪಾತ ಅವಶ್ಯಕವಿದ್ದು, ಈ ಅನುಪಾತ ಮೀರದಂತೆ ಕಾಮಗಾರಿ ಕೈಗೊಳ್ಳಿರಿ ಎಂದು ಸಲಹೆ ನೀಡಿದರು.

ಜೊತೆಗೆ ಪಿ.ಆರ್.ಇ.ಡಿ ಇಲಾಖೆ ಅವರಿಗೆ ಸೂಕ್ತವಾದ ಜಾಗದಲ್ಲಿ ಸಮರ್ಪಕವಾದ ರಸ್ತೆ ಕಲ್ಪಿಸಿಕೊಡುವಂತೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.

ವಸತಿ ಯೋಜನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಯವರಿಂದ ಮಾಹಿತಿ ಪಡೆದುಕೊಂಡಿದ್ದು, ಇರುವ ತಾಂತ್ರಿಕ ಸಮಸ್ಯೆ ಕುರಿತು ಆಲಿಸಿದರು. ಹೊಸದಾಗಿ ತೆಗೆದುಕೊಂಡಿರುವ ಮನೆಗಳ ಕುರಿತು ತಾಂತ್ರಿಕವಾಗಿ ಆಗಿರುವಂತಹ ಸಮಸ್ಯೆಗಳ ಕುರಿತು ಪರಿಹರಿಸುವಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಬಳಿಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಂಗಳೂರು ಮಾಳ ಗ್ರಾಮ ಮತ್ತು ಬಿಜಾಪುರ ಕಾಲೋನಿಯಲ್ಲಿರುವ ಸರ್ಕಾರಿ ಶಾಲೆಗೆ ಭೇಟಿ ನೀಡಿ, ಅಲ್ಲಿನ ಸ್ಥಳೀಯರೊಂದಿಗೆ ಗ್ರಾಮದಲ್ಲಿರುವಂತಹ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರಕ್ಕೆ ಸೂಚಿಸಿದರು.

ಈ ವೇಳೆ ನರೇಗಾದಿಂದ ಚರಂಡಿ ವ್ಯವಸ್ಥೆ, ಮಕ್ಕಳ ಲಾಲನೆ ಪಾಲನೆಗೆ ಅವಶ್ಯಕ ಅಂಗನವಾಡಿ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಮಕ್ಕಳ ಕಲಿಕೆಗೆ ಅಡಚಣೆಯಾಗುತ್ತಿರುವುದನ್ನು ಮನಗಂಡು ಬಿಜಾಪುರ ಕಾಲೋನಿಯಲ್ಲಿರುವ ಸರ್ಕಾರಿ ಶಾಲಾ ಆವರಣದಲ್ಲಿರುವ ಒಂದು ಕೊಠಡಿಯನ್ನು ಕಂಡು ಕಾಮಗಾರಿ ಪೂರ್ಣಗೊಳ್ಳುವವರೆಗೆ ಹತ್ತಿರದಲ್ಲಿರುವ ಶಾಲೆಯಲ್ಲಿ ಅಂಗನವಾಡಿ ನಡೆಸುವಂತೆ ಮುಖ್ಯೋಪಾಧ್ಯಾರಿಗೆ ಸೂಚಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

3 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

3 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

3 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

3 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

3 hours ago