ಮೈಸೂರು

ಮೂವರು ಹೆಂಡತಿಯರು ; 2ನೇ ಹೆಂಡತಿಯನ್ನು ಮನೆಯಿಂದ ಹೊರಹಾಕಿದ ಗಂಡ : ದೂರು ದಾಖಲು

ಹುಣಸೂರು : ಮೂವರು ಮಡದಿಯರ ಪತಿರಾಯ ತನಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದಾನೆ ಎಂದು ಆರೋಪಿಸಿ ನೊಂದ ಎರಡನೇ ಪತ್ನಿ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಳಿಕೆರೆ ಠಾಣಾ ವ್ಯಾಪ್ತಿಯ ದಲ್ಲಾಳುಕೊಪ್ಪಲು ಗ್ರಾಮದ ನಿವಾಸಿ ಮಹದೇವ್ ಮೂರು ಮಡದಿಯರ ಪತಿ. ಈತ ತನ್ನ ಎರಡನೇ ಪತ್ನಿ ನೇತ್ರಾವತಿಗೆ ಮೂರನೇ ಪತ್ನಿಯೆಂದು ಹೇಳುತ್ತಿರುವ ಮಮತಾ ಮತ್ತು ಅತ್ತೆ ಸಿಂಗಮ್ಮ ಈ ಮೂವರು ಸೇರಿಕೊಂಡು ಮನೆಯಿಂದ ಹೊರಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಹದೇವನ ಮೊದಲ ಪತ್ನಿ ಎಲ್ಲಿದ್ದಾರೆ? ಯಾರು? ಎನ್ನುವುದು ನನಗೂ ತಿಳಿದಿಲ್ಲ. ತಾನು ಮದುವೆಯದ ನಂತರವಷ್ಟೇ ತನ್ನ ಪತಿಗೆ ಮೊದಲ ಪತ್ನಿ ಇದ್ದಾರೆ ಎಂದು ತಿಳಿಯಿತು ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪತಿ ತನ್ನೊಂದಿಗೆ ಕಳೆದ 7-8 ವರ್ಷಗಳಿಂದ ಸಂಸಾರ ನಡೆಸಿದ್ದು, ಎರಡು ಹೆಣ್ಣುಮಕ್ಕಳು ಇದ್ದಾರೆ. ಇದೀಗ ಮೂರನೇ ಪತ್ನಿ ಎನಿಸಿಕೊಂಡಿರುವ ಮಮತಾ, ಅತ್ತೆ ಸಿಂಗಮ್ಮ ಮತ್ತು ಪತಿ ಸೇರಿಕೊಂಡು ದೈಹಿಕ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿದ್ದಾರೆ. ಪತಿಯ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡು ಮಕ್ಕಳೊಂದಿಗೆ ಇದ್ದೆ. ಇದೀಗ ಗುಡಿಸಲಿನಿಂದಲೂ ಹೊರದಬ್ಬಿದ್ದಾರೆ. ಊರು ಬಿಟ್ಟು ಹೋಗು ಎಂದು ಒತ್ತಾಯಿಸುತ್ತಿದ್ದಾರೆ. ಕೂಲಿನಾಲಿ ಮಾಡಿ ಮಕ್ಕಳನ್ನು ಸಾಕುತ್ತಿದ್ದೇನೆ. ನನಗೆ ನ್ಯಾಯ ಕೊಡಿಸಿ ಎಂದು ನೊಂದ ಮಹಿಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಅಲವತ್ತುಕೊಂಡಿದ್ದರು.

ಇದೀಗ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಮಹದೇವರನ್ನು ಪತ್ತೆ ಹಚ್ಚಲು ಕ್ರಮವಹಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಸಂತೋಷ್ ಕಶ್ಯಪ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

33 mins ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

43 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

2 hours ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

2 hours ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

2 hours ago