ಮೈಸೂರು

ಮೂವರು ಹೆಂಡತಿಯರು ; 2ನೇ ಹೆಂಡತಿಯನ್ನು ಮನೆಯಿಂದ ಹೊರಹಾಕಿದ ಗಂಡ : ದೂರು ದಾಖಲು

ಹುಣಸೂರು : ಮೂವರು ಮಡದಿಯರ ಪತಿರಾಯ ತನಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದಾನೆ ಎಂದು ಆರೋಪಿಸಿ ನೊಂದ ಎರಡನೇ ಪತ್ನಿ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಳಿಕೆರೆ ಠಾಣಾ ವ್ಯಾಪ್ತಿಯ ದಲ್ಲಾಳುಕೊಪ್ಪಲು ಗ್ರಾಮದ ನಿವಾಸಿ ಮಹದೇವ್ ಮೂರು ಮಡದಿಯರ ಪತಿ. ಈತ ತನ್ನ ಎರಡನೇ ಪತ್ನಿ ನೇತ್ರಾವತಿಗೆ ಮೂರನೇ ಪತ್ನಿಯೆಂದು ಹೇಳುತ್ತಿರುವ ಮಮತಾ ಮತ್ತು ಅತ್ತೆ ಸಿಂಗಮ್ಮ ಈ ಮೂವರು ಸೇರಿಕೊಂಡು ಮನೆಯಿಂದ ಹೊರಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಹದೇವನ ಮೊದಲ ಪತ್ನಿ ಎಲ್ಲಿದ್ದಾರೆ? ಯಾರು? ಎನ್ನುವುದು ನನಗೂ ತಿಳಿದಿಲ್ಲ. ತಾನು ಮದುವೆಯದ ನಂತರವಷ್ಟೇ ತನ್ನ ಪತಿಗೆ ಮೊದಲ ಪತ್ನಿ ಇದ್ದಾರೆ ಎಂದು ತಿಳಿಯಿತು ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪತಿ ತನ್ನೊಂದಿಗೆ ಕಳೆದ 7-8 ವರ್ಷಗಳಿಂದ ಸಂಸಾರ ನಡೆಸಿದ್ದು, ಎರಡು ಹೆಣ್ಣುಮಕ್ಕಳು ಇದ್ದಾರೆ. ಇದೀಗ ಮೂರನೇ ಪತ್ನಿ ಎನಿಸಿಕೊಂಡಿರುವ ಮಮತಾ, ಅತ್ತೆ ಸಿಂಗಮ್ಮ ಮತ್ತು ಪತಿ ಸೇರಿಕೊಂಡು ದೈಹಿಕ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿದ್ದಾರೆ. ಪತಿಯ ಜಮೀನಿನಲ್ಲಿ ಗುಡಿಸಲು ಹಾಕಿಕೊಂಡು ಮಕ್ಕಳೊಂದಿಗೆ ಇದ್ದೆ. ಇದೀಗ ಗುಡಿಸಲಿನಿಂದಲೂ ಹೊರದಬ್ಬಿದ್ದಾರೆ. ಊರು ಬಿಟ್ಟು ಹೋಗು ಎಂದು ಒತ್ತಾಯಿಸುತ್ತಿದ್ದಾರೆ. ಕೂಲಿನಾಲಿ ಮಾಡಿ ಮಕ್ಕಳನ್ನು ಸಾಕುತ್ತಿದ್ದೇನೆ. ನನಗೆ ನ್ಯಾಯ ಕೊಡಿಸಿ ಎಂದು ನೊಂದ ಮಹಿಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಅಲವತ್ತುಕೊಂಡಿದ್ದರು.

ಇದೀಗ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಮಹದೇವರನ್ನು ಪತ್ತೆ ಹಚ್ಚಲು ಕ್ರಮವಹಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಸಂತೋಷ್ ಕಶ್ಯಪ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago