ಮೈಸೂರು: ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ಧಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್ನಲ್ಲಿ ನಡೆದಿದೆ.
ಗಾಯಗೊಂಡ ಪತ್ನಿ ಮಂಗಳಮ್ಮ ಅವರಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಮೀಪದಲ್ಲೇ ಇದ್ದ ಮಗಳು ಸುಮತಿಗೂ ಸುಟ್ಟಗಾಯಗಳಾಗಿದೆ.
ಮೂಲತಃ ನಂಜನಗೂಡು ನಿವಾಸಿಗಳಾದ ರಾಜು ಹಾಗೂ ಮಂಗಳಮ್ಮ ಜೀವನೋಪಾಯಕ್ಕಾಗಿ ೪ ತಿಂಗಳ ಹಿಂದೆ ಮೈಸೂರಿಗೆ ಬಂದು ಹಿನಕಲ್ನಲ್ಲಿ ನೆಲೆಸಿದ್ದರು. ಕುಡಿತದ ಚಟಕ್ಕೆ ದಾಸನಾಗಿದ್ದ ರಾಜು ಕೆಲಸಕ್ಕೆ ಹೋಗುತ್ತಿರಲಿಲ್ಲ.
ಕಳೆದ ಎರಡು ದಿನಗಳ ಹಿಂದೆ ಕೆಲಸ ಮುಗಿಸಿ ಮಂಗಳಮ್ಮ ಮನೆಗೆ ಹಿಂದಿರುಗಿದಾಗ ರಾಜು ಮನೆಯಲ್ಲೇ ಕುಡಿದು ಬಿದ್ದಿದ್ದ ಎನ್ನಲಾಗಿದೆ. ಕೆಲಸಕ್ಕೆ ಹೋಗಲಿಲ್ಲ ಎಂದರೆ ಸಂಸಾರ ಹೇಗೆ ನಡೆಯುತ್ತದೆ. ಕುಡಿತ ಬಿಟ್ಟು ಕೆಲಸಕ್ಕೆ ಹೋಗು ಎಂದು ಪತಿಗೆ ಬುದ್ಧಿವಾದ ಹೇಳಿದ್ದಾರೆ.
ಇಷ್ಟಕ್ಕೇ ಸಿಟ್ಟಿಗೆದ್ದ ರಾಜು ನೀನು ಇದ್ದರೆ ತಾನೆ ಕೆಲಸಕ್ಕೆ ಹೋಗು ಎನ್ನುತ್ತೀಯ. ನನ್ನ ಸಂಪಾದನೆಯಲ್ಲಿ ನಾನು ಕುಡಿಯುತ್ತೇನೆ ಎಂದು ಅರಚಾಡಿದ್ದಾನೆ. ನಂತರ ಒಲೆ ಮೇಲೆ ಕುದಿಯುತ್ತಿದ್ದ ಬಿಸಿ ಸಾಂಬಾರ್ ಎತ್ತಿ ಮಂಗಳಮ್ಮ ಮೇಲೆ ಸುರಿದಿದ್ದಾನೆ. ಈ ವೇಳೆ ಪಕ್ಕದಲ್ಲಿದ್ದ ಮಗಳು ಸುಮತಿ ಮೇಲೂ ಸಾಂಬಾರ್ ಚೆಲ್ಲಿದೆ. ಗಾಯಗೊಂಡ ತಾಯಿ, ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳಮ್ಮ ಅವರು ವಿಜಯನಗರ ಠಾಣೆಯಲ್ಲಿ ರಾಜು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…