ಮೈಸೂರು

ಕೆಲಸಕ್ಕೆ ಹೋಗು ಎಂದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಪತಿ

ಮೈಸೂರು: ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ಧಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್‌ನಲ್ಲಿ ನಡೆದಿದೆ.

ಗಾಯಗೊಂಡ ಪತ್ನಿ ಮಂಗಳಮ್ಮ ಅವರಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಮೀಪದಲ್ಲೇ ಇದ್ದ ಮಗಳು ಸುಮತಿಗೂ ಸುಟ್ಟಗಾಯಗಳಾಗಿದೆ.

ಮೂಲತಃ ನಂಜನಗೂಡು ನಿವಾಸಿಗಳಾದ ರಾಜು ಹಾಗೂ ಮಂಗಳಮ್ಮ ಜೀವನೋಪಾಯಕ್ಕಾಗಿ ೪ ತಿಂಗಳ ಹಿಂದೆ ಮೈಸೂರಿಗೆ ಬಂದು ಹಿನಕಲ್‌ನಲ್ಲಿ ನೆಲೆಸಿದ್ದರು. ಕುಡಿತದ ಚಟಕ್ಕೆ ದಾಸನಾಗಿದ್ದ ರಾಜು ಕೆಲಸಕ್ಕೆ ಹೋಗುತ್ತಿರಲಿಲ್ಲ.

ಕಳೆದ ಎರಡು ದಿನಗಳ ಹಿಂದೆ ಕೆಲಸ ಮುಗಿಸಿ ಮಂಗಳಮ್ಮ ಮನೆಗೆ ಹಿಂದಿರುಗಿದಾಗ ರಾಜು ಮನೆಯಲ್ಲೇ ಕುಡಿದು ಬಿದ್ದಿದ್ದ ಎನ್ನಲಾಗಿದೆ. ಕೆಲಸಕ್ಕೆ ಹೋಗಲಿಲ್ಲ ಎಂದರೆ ಸಂಸಾರ ಹೇಗೆ ನಡೆಯುತ್ತದೆ. ಕುಡಿತ ಬಿಟ್ಟು ಕೆಲಸಕ್ಕೆ ಹೋಗು ಎಂದು ಪತಿಗೆ ಬುದ್ಧಿವಾದ ಹೇಳಿದ್ದಾರೆ.

ಇಷ್ಟಕ್ಕೇ ಸಿಟ್ಟಿಗೆದ್ದ ರಾಜು ನೀನು ಇದ್ದರೆ ತಾನೆ ಕೆಲಸಕ್ಕೆ ಹೋಗು ಎನ್ನುತ್ತೀಯ. ನನ್ನ ಸಂಪಾದನೆಯಲ್ಲಿ ನಾನು ಕುಡಿಯುತ್ತೇನೆ ಎಂದು ಅರಚಾಡಿದ್ದಾನೆ. ನಂತರ ಒಲೆ ಮೇಲೆ ಕುದಿಯುತ್ತಿದ್ದ ಬಿಸಿ ಸಾಂಬಾರ್ ಎತ್ತಿ ಮಂಗಳಮ್ಮ ಮೇಲೆ ಸುರಿದಿದ್ದಾನೆ. ಈ ವೇಳೆ ಪಕ್ಕದಲ್ಲಿದ್ದ ಮಗಳು ಸುಮತಿ ಮೇಲೂ ಸಾಂಬಾರ್ ಚೆಲ್ಲಿದೆ. ಗಾಯಗೊಂಡ ತಾಯಿ, ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳಮ್ಮ ಅವರು ವಿಜಯನಗರ ಠಾಣೆಯಲ್ಲಿ ರಾಜು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

3 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

5 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

6 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

8 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

11 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

12 hours ago