ಮೈಸೂರು: ಹೆಂಡತಿ ತವರು ಮನೆಗೆ ಹೋದಳೆಂದು ಕೋಪಗೊಂಡ ಪತಿರಾಯ ತನ್ನ ಮಗನ ಎದುರೇ ಪತ್ನಿಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಜಿಲ್ಲೆಯ ಎಚ್.ಡಿ.ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ.
ಮಧುರ ಎಂಬುವವರೇ ಗಂಭೀರ ಗಾಯಗೊಂಡಿರುವ ಪತ್ನಿಯಾಗಿದ್ದು, ಆಕೆಯ ಗಂಡ ಮಲ್ಲೇಶ್ ನಾಯ್ಕ್ ಎಂಬಾತನಿಂದ ಕೃತ್ಯ ನಡೆದಿದೆ.
ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಜಯನಗರ ಜಿಲ್ಲೆ ಕೂಡ್ಲಗಿ ತಾಲ್ಲೂಕಿನ ಬಿಬಿ ತಾಂಡದವನಾದ ಮಲ್ಲೇಶ್, ಕಳೆದ ಎಂಟು ವರ್ಷಗಳ ಹಿಂದೆ ಅದೇ ಗ್ರಾಮದ ಮಧುರಳನ್ನು ವಿವಾಹವಾಗಿದ್ದ.
ಸದ್ಯ ಮಲ್ಲೇಶ್ ನಾಯ್ಕ್ ಎಚ್.ಡಿ.ಕೋಟೆಯ ಕೆಎಸ್ಆರ್ಟಿಸಿ ಡಿಪೋದಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ.
ವರದಕ್ಷಿಣ ತರುವಂತೆ ಹೆಂಡತಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದ ಮಲ್ಲೇಶ್, ಪ್ರತಿ ದಿನ ಕುಡಿದು ಬಂದು ಜಗಳವಾಡುತ್ತಿದ್ದ. ಈ ನಡುವೆ ಕೆಲ ದಿನಗಳ ಹಿಂದೆ ಮಧುರ ತವರು ಮನೆಗೆ ಹೋಗಿ ಬಂದಿದ್ದರು. ಈ ವಿಚಾರವನ್ನೇ ಇಟ್ಟುಕೊಂಡು ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…