ಮೈಸೂರು: ಹೆಂಡತಿ ತವರು ಮನೆಗೆ ಹೋದಳೆಂದು ಕೋಪಗೊಂಡ ಪತಿರಾಯ ತನ್ನ ಮಗನ ಎದುರೇ ಪತ್ನಿಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಜಿಲ್ಲೆಯ ಎಚ್.ಡಿ.ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ.
ಮಧುರ ಎಂಬುವವರೇ ಗಂಭೀರ ಗಾಯಗೊಂಡಿರುವ ಪತ್ನಿಯಾಗಿದ್ದು, ಆಕೆಯ ಗಂಡ ಮಲ್ಲೇಶ್ ನಾಯ್ಕ್ ಎಂಬಾತನಿಂದ ಕೃತ್ಯ ನಡೆದಿದೆ.
ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಜಯನಗರ ಜಿಲ್ಲೆ ಕೂಡ್ಲಗಿ ತಾಲ್ಲೂಕಿನ ಬಿಬಿ ತಾಂಡದವನಾದ ಮಲ್ಲೇಶ್, ಕಳೆದ ಎಂಟು ವರ್ಷಗಳ ಹಿಂದೆ ಅದೇ ಗ್ರಾಮದ ಮಧುರಳನ್ನು ವಿವಾಹವಾಗಿದ್ದ.
ಸದ್ಯ ಮಲ್ಲೇಶ್ ನಾಯ್ಕ್ ಎಚ್.ಡಿ.ಕೋಟೆಯ ಕೆಎಸ್ಆರ್ಟಿಸಿ ಡಿಪೋದಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ.
ವರದಕ್ಷಿಣ ತರುವಂತೆ ಹೆಂಡತಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದ ಮಲ್ಲೇಶ್, ಪ್ರತಿ ದಿನ ಕುಡಿದು ಬಂದು ಜಗಳವಾಡುತ್ತಿದ್ದ. ಈ ನಡುವೆ ಕೆಲ ದಿನಗಳ ಹಿಂದೆ ಮಧುರ ತವರು ಮನೆಗೆ ಹೋಗಿ ಬಂದಿದ್ದರು. ಈ ವಿಚಾರವನ್ನೇ ಇಟ್ಟುಕೊಂಡು ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…