ಮೈಸೂರು

ನ.ಗೂಡು | ಪತ್ನಿಯ ಅಕ್ರಮ ಸಂಬಂಧ ವಿರೋಧಿಸಿದ್ದ ಪತಿ ಸಾವು ; ಪತ್ನಿಯ ಬಂಧನ

ನಂಜನಗೂಡು : ಪತ್ನಿಯ ಅಕ್ರಮ ಸಂಬಂಧ ವಿರೋಧಿಸಿದ ಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ನಡೆದಿದೆ.

ಪತಿಯ ಮರ್ಮಾಂಗ ಹಿಸುಕಿ ಕೊಂದಿರುವ ಶಂಕೆ ವ್ಯಕ್ತವಾಗಿದ್ದು, ಪತಿಯ ಮೃತದೇಹವನ್ನ ನೇಣಿನ ಕುಣಿಕೆಗೆ ಹಾಕಿ ಆತ್ಮಹತ್ಯೆ ಎಂದು ಬಿಂಬಿಸುವ ವೇಳೆ ಕಿಲಾಡಿ ಪತ್ನಿ ಸಿಕ್ಕಿಬಿದ್ದಿದ್ದಾಳೆ.

ಇಂದಿರಾನಗರ ಗ್ರಾಮದ ಚಿಕ್ಕ ಯಜಮಾನ ಹಾಗೂ ಸಮಸ್ಯೆಗಳಿಗೆ ನ್ಯಾಯ ನೀಡುತ್ತಿದ್ದ ವೀರಣ್ಣ(41) ಮೃತ ದುರ್ದೈವಿ.

ಆರೋಪಿ ಶಿವಮ್ಮ(35) ಇದೀಗ ಹುಲ್ಲಹಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. 13 ವರ್ಷಗಳ ಹಿಂದೆ ಇಬ್ಬರ ವಿವಾಹ ನೆರವೇರಿತ್ತು. ಇಬ್ಬರು ಗಂಡು ಮಕ್ಕಳಿದ್ದರು. ಕಳೆದ ನಾಲ್ಕು ವರ್ಷದಿಂದ ಹೆಚ್.ಡಿ.ಕೋಟೆಯ ಬಲರಾಮ ಎಂಬಾತನ ಜೊತೆ ಶಿವಮ್ಮ ಪರಿಚಯ ಆಗಿತ್ತು. ಇದು ಅಕ್ರಮ ಸಂಬಂಧಕ್ಕೂ ದಾರಿ ಆಗಿತ್ತು. ಈ ವಿಚಾರ ಪತಿ ವೀರಣ್ಣಗೆ ತಿಳಿದು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಈ ವಿಚಾರದಲ್ಲಿ ನ್ಯಾಯ ಪಂಚಾಯ್ತಿ ಸಹ ನಡೆದಿತ್ತು. ಹಲವು ಬಾರಿ ಆತನ ಸಂಪರ್ಕ ಬಿಡುವಂತೆ ಬುದ್ದಿ ಹೇಳಲಾಗಿತ್ತು. ಹೀಗಿದ್ದೂ ಶಿವಮ್ಮ ಹಾಗೂ ಬಲರಾಮ್ ನಡುವೆ ಸಂಬಂಧ ಮುಂದುವರೆದಿತ್ತು. ನಿನ್ನೆ ರಾತ್ರಿ ಬಲರಾಮ ಫೋನ್ ಮಾಡಿದ್ದಾನೆ. ಈ ವಿಚಾರದಲ್ಲಿ ದಂಪತಿ ನಡುವೆ ಗಲಾಟೆ ಆಗಿದೆ. ರಾತ್ರಿ ಊಟ ಮಾಡಿ ಪತಿ ಮಲಗಿದ್ದಾರೆ. ಕೆಲವೇ ಸಮಯದಲ್ಲಿ ಶಿವಮ್ಮ ಬಾಯಿ ಬಡಿದುಕೊಂಡು ಮನೆಯಿಂದ ಹೊರಬಂದಿದ್ದಾಳೆ. ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿಸಿದ್ದಾಳೆ. ಕುತ್ತಿಗೆಯಲ್ಲಿ ಸೀರೆ ಕಂಡು ಬಂದಿದೆ. ಮಾಹಿತಿ ಅರಿತ ಹುಲ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ಮಾಡಿದಾಗ ಬಲರಾಮನ ಜೊತೆ ಸಂಬಂಧ ಬಿಚ್ಚಿಟ್ಟಿದ್ದಾಳೆ. ಪತಿಯ ಮರ್ಮಾಂಗ ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶಿವಮ್ಮಳನ್ನ ವಿಚಾರಣೆಗೆ ಒಳಪಡಿಸಿದಾಗ ಸಂಚು ಬಯಲಾಗಿದೆ. ಊರಿಗೆ ನ್ಯಾಯ ಹೇಳುತ್ತಿದ್ದ ವೀರಣ್ಣ ಪತ್ನಿ ಸಂಚಿಗೆ ಬಲಿಯಾಗಿರುವುದು ದುರಂತ. ಸದ್ಯ ಹುಲ್ಲಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

7 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

9 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

11 hours ago