ಮೈಸೂರು

ನ.ಗೂಡು | ಪತ್ನಿಯ ಅಕ್ರಮ ಸಂಬಂಧ ವಿರೋಧಿಸಿದ್ದ ಪತಿ ಸಾವು ; ಪತ್ನಿಯ ಬಂಧನ

ನಂಜನಗೂಡು : ಪತ್ನಿಯ ಅಕ್ರಮ ಸಂಬಂಧ ವಿರೋಧಿಸಿದ ಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ನಡೆದಿದೆ.

ಪತಿಯ ಮರ್ಮಾಂಗ ಹಿಸುಕಿ ಕೊಂದಿರುವ ಶಂಕೆ ವ್ಯಕ್ತವಾಗಿದ್ದು, ಪತಿಯ ಮೃತದೇಹವನ್ನ ನೇಣಿನ ಕುಣಿಕೆಗೆ ಹಾಕಿ ಆತ್ಮಹತ್ಯೆ ಎಂದು ಬಿಂಬಿಸುವ ವೇಳೆ ಕಿಲಾಡಿ ಪತ್ನಿ ಸಿಕ್ಕಿಬಿದ್ದಿದ್ದಾಳೆ.

ಇಂದಿರಾನಗರ ಗ್ರಾಮದ ಚಿಕ್ಕ ಯಜಮಾನ ಹಾಗೂ ಸಮಸ್ಯೆಗಳಿಗೆ ನ್ಯಾಯ ನೀಡುತ್ತಿದ್ದ ವೀರಣ್ಣ(41) ಮೃತ ದುರ್ದೈವಿ.

ಆರೋಪಿ ಶಿವಮ್ಮ(35) ಇದೀಗ ಹುಲ್ಲಹಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. 13 ವರ್ಷಗಳ ಹಿಂದೆ ಇಬ್ಬರ ವಿವಾಹ ನೆರವೇರಿತ್ತು. ಇಬ್ಬರು ಗಂಡು ಮಕ್ಕಳಿದ್ದರು. ಕಳೆದ ನಾಲ್ಕು ವರ್ಷದಿಂದ ಹೆಚ್.ಡಿ.ಕೋಟೆಯ ಬಲರಾಮ ಎಂಬಾತನ ಜೊತೆ ಶಿವಮ್ಮ ಪರಿಚಯ ಆಗಿತ್ತು. ಇದು ಅಕ್ರಮ ಸಂಬಂಧಕ್ಕೂ ದಾರಿ ಆಗಿತ್ತು. ಈ ವಿಚಾರ ಪತಿ ವೀರಣ್ಣಗೆ ತಿಳಿದು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಈ ವಿಚಾರದಲ್ಲಿ ನ್ಯಾಯ ಪಂಚಾಯ್ತಿ ಸಹ ನಡೆದಿತ್ತು. ಹಲವು ಬಾರಿ ಆತನ ಸಂಪರ್ಕ ಬಿಡುವಂತೆ ಬುದ್ದಿ ಹೇಳಲಾಗಿತ್ತು. ಹೀಗಿದ್ದೂ ಶಿವಮ್ಮ ಹಾಗೂ ಬಲರಾಮ್ ನಡುವೆ ಸಂಬಂಧ ಮುಂದುವರೆದಿತ್ತು. ನಿನ್ನೆ ರಾತ್ರಿ ಬಲರಾಮ ಫೋನ್ ಮಾಡಿದ್ದಾನೆ. ಈ ವಿಚಾರದಲ್ಲಿ ದಂಪತಿ ನಡುವೆ ಗಲಾಟೆ ಆಗಿದೆ. ರಾತ್ರಿ ಊಟ ಮಾಡಿ ಪತಿ ಮಲಗಿದ್ದಾರೆ. ಕೆಲವೇ ಸಮಯದಲ್ಲಿ ಶಿವಮ್ಮ ಬಾಯಿ ಬಡಿದುಕೊಂಡು ಮನೆಯಿಂದ ಹೊರಬಂದಿದ್ದಾಳೆ. ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿಸಿದ್ದಾಳೆ. ಕುತ್ತಿಗೆಯಲ್ಲಿ ಸೀರೆ ಕಂಡು ಬಂದಿದೆ. ಮಾಹಿತಿ ಅರಿತ ಹುಲ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ಮಾಡಿದಾಗ ಬಲರಾಮನ ಜೊತೆ ಸಂಬಂಧ ಬಿಚ್ಚಿಟ್ಟಿದ್ದಾಳೆ. ಪತಿಯ ಮರ್ಮಾಂಗ ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶಿವಮ್ಮಳನ್ನ ವಿಚಾರಣೆಗೆ ಒಳಪಡಿಸಿದಾಗ ಸಂಚು ಬಯಲಾಗಿದೆ. ಊರಿಗೆ ನ್ಯಾಯ ಹೇಳುತ್ತಿದ್ದ ವೀರಣ್ಣ ಪತ್ನಿ ಸಂಚಿಗೆ ಬಲಿಯಾಗಿರುವುದು ದುರಂತ. ಸದ್ಯ ಹುಲ್ಲಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

7 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

8 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

9 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

13 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

14 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

20 hours ago