ಮೈಸೂರು : ‘‘ನಾನು ಮೋದಿ ಪರಿವಾರ-ಮೋದಿಗಾಗಿ ಮೀಸಲು ಈ ಭಾನುವಾರ’’ ಎಂಬ ಘೋಷವಾಕ್ಯದೊಂದಿಗೆ ಮನೆ ಮನೆ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಏ.೨೧ರ ಭಾನುವಾರ ಬೆಳಿಗ್ಗೆ ೮ಗಂಟೆಗೆ ನಗರಪಾಲಿಕೆ ವಾರ್ಡ್ ಸಂಖ್ಯೆ ೫೫ರ ಬೂತ್ ಸಂಖ್ಯೆ ೨೩೮ರಲ್ಲಿ ವಿದ್ಯಾರಣ್ಯಪುರಂನ ತಮ್ಮ ಮನೆಯಿಂದ ಸಂಪರ್ಕ ಕಾರ್ಯಕ್ರಮ ಆರಂಭಿಸಲಿದ್ದೇವೆ ಎಂದು ತಿಳಿಸಿದ್ದಾರೆ.
ಬೂತ್ನಲ್ಲಿ ೭೦೫ ಮತದಾರರಿದ್ದು, ಪ್ರತಿಯೊಬ್ಬರನ್ನೂ ಸಂಪರ್ಕ ಮಾಡಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತ್ತು ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸಿ ಈ ಬಾರಿ ಶೇ.ನೂರರಷ್ಟು ಮತದಾನವನ್ನು ಬೂತ್ ಸಂಖ್ಯೆ ೨೩೮ರಲ್ಲಿ ಮಾಡಿಸಿ ಬಿಜೆಪಿಗೆ ಹೆಚ್ಚು ಮತಗಳು ಬರುವಂತೆ ಮಾಡುವ ಉದ್ದೇಶದಿಂದ ಮನೆ ಮನೆ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…
ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯ ಕಾಂಗ್ರೆಸ್…
ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ ರೈಲು ಡಿಬಾಲೊಂಗ್ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…