ಮೈಸೂರು

ನಾನು ಮೋದಿ ಹೇಳಿದ ಕೆಲಸ ಮಾಡುವ ಮೇಸ್ತ್ರಿ: ಸಂಸದ ಪ್ರತಾಪ್‌ ಸಿಂಹ

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಸಂಸದ ಬುರುಡೆ ಬಿಡುತ್ತಾನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ ಸಿಂಹ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ನನ್ನ ರಸ್ತೆಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ರಸ್ತೆ. ನಾನು ಒಬ್ಬ ಮೇಸ್ತ್ರಿಯಷ್ಟೆ. ಮೋದಿ ಹೇಳಿದ ಕೆಲಸ ಮಾಡುವ ಮೇಸ್ತ್ರಿ. ಮುಖ್ಯಮಂತ್ರಿಯಾದವರು ಪದ ಪ್ರಯೋಗದಲ್ಲಿ ಎಚ್ಚರ ವಹಿಸಬೇಕು. ಎಲ್ಲರನ್ನೂ ತಾತ್ಸರದಿಂದ ಮಾತಾಡುವುದನ್ನು ನಿಲ್ಲಿಸಲಿ. ರಾಜಕೀಯ ಮಾಡಬೇಕು ಎಂದುಕೊಂಡವರು ಹೇಳಿಕೊಳ್ಳಲು ಏನೂ ಇಲ್ಲದಿದ್ದಾಗ ಈ ರೀತಿ ಕ್ರೆಡಿಟ್ ಪಾಲಿಟಿಕ್ಸ್ ಶುರು ಮಾಡುತ್ತಾರೆ’ ಎಂದು ತಿರುಗೇಟು ನೀಡಿದರು.

ಇದು ೮೫೦೦ ಕೋಟಿ ಯೋಜನೆಯಾಗಿದೆ. ಇದಕ್ಕೆ ಸಿದ್ದರಾಮಯ್ಯ ಸರ್ಕಾರದಿಂದ ೮ ರೂಪಾಯಿ ಬಂದಿದ್ದರು ಸಿದ್ದರಾಮಯ್ಯ-ಎಚ್‌.ಸಿ ಮಹದೇವಪ್ಪ ಜೋಡಿ ರಸ್ತೆ ಎಂದೇ ಹೆಸರಿಡೋಣ ಎಂದು ವ್ಯಂಗ್ಯವಾಡಿದರು.

ಯಾರು ಬುರುಡೆ ಬಿಡುತ್ತಿದ್ದಾರೆ, ಯಾರು ಖಾಲಿ ಡಬ್ಬ ಅಲ್ಲಾಡಿಸುತ್ತಿದ್ದಾರೆ ಎಂಬುದು ಆ ರಸ್ತೆಯಲ್ಲಿ ಓಡಾಡುತ್ತಿರುವ ಜನರಿಗೆ ಗೊತ್ತಿದೆ. ರಸ್ತೆಯಲ್ಲಿ ನೀರು ತುಂಬಿದಾಗ, ರಸ್ತೆಯಲ್ಲಿ ಅಪಘಾತ ಹೆಚ್ಚಾದಾಗ ಜನರು ಬೈದಿದ್ದು, ನನ್ನನ್ನೇ. ಎಲ್ಲ ಸಮಸ್ಯೆ ಪರಿಹರಿಸಿದ್ದು ಪ್ರತಾಪ್‌ ಸಿಂಹನೇ. ಸಮಸ್ಯೆ ಎದುರಾಗಿದ್ದಾಗ ಸಿದ್ದರಾಮಯ್ಯ, ಎಚ್‌.ಸಿ ಮಹದೇವಪ್ಪ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು.

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಪ್ರಸ್ತಾಪ ಸಂಬಂಧಿಸಿದಂತೆ, ಸಿದ್ದರಾಮಯ್ಯ ಪ್ರೀತಿ, ಅಭಿಮಾನ, ಗೌರವ ಮತ್ತು ನಿಷ್ಠೆ ಟಿಪ್ಪುಗೆ ಹೊರತು ಮಹಾರಾಜರಿಗಲ್ಲ. ಈಗಾಗಿಯೇ ನಮ್ಮ ಸರ್ಕಾರದ ಅವಧಿಯಲ್ಲಿ ಮಹಾರಾಜರ ಹೆಸರನ್ನು ನಿಲ್ದಾಣಕ್ಕೆ ಇಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿತ್ತು ಎಂದರು.

ಐಷಾರಾಮಿ ಜೆಟ್‌ನಲ್ಲಿ ಸಿದ್ದರಾಮಯ್ಯ ಪ್ರಯಾಣಿದ ಬಗ್ಗೆ ಪ್ರತಿಕ್ರಿಯಿಸಿ, ತಮ್ಮ ನಡೆ ಸಮರ್ಥಿಸಿಕೊಳ್ಳಲು ಸಿದ್ದರಾಮಯ್ಯ ಅವರು ಪ್ರಧಾನಿಯನ್ನು ಎಳೆದು ತಂದಿದ್ದಾರೆ. ದೇಶಕ್ಕೆ ಇರುವುದು ಒಬ್ಬರೇ ಪ್ರಧಾನಿ. ದೇಶದಲ್ಲಿ 29 ಜನ ಮುಖ್ಯಮಂತ್ರಗಳಿದ್ದಾರೆ. ನೀವು ಸುಮ್ಮನೆ ಪ್ರಧಾನಿಗೆ ಹೋಲಿಕೆ ಮಾಡಿಕೊಳ್ಳಬೇಡಿ ಎಂದು ಕುಟುಕಿದರು.

ಸಿದ್ದರಾಮಯ್ಯ ಮೈಸೂರು ಅಭಿವೃದ್ಧಿಯನ್ನು ಮಹಾರಾಜರು ತಮ್ಮ ಮನೆಯಿಂದ ದುಡ್ಡು ತಂದು ಮಾಡಿಲ್ಲವೆಂದು ಈ ಹಿಂದೆ ಹೇಳಿದ್ದರು. ಈಗ ಆಸ್ಪತ್ರ ನಾನು ಮಾಡಿದೆ. ಮನೆ ಯಜಮಾನಿಗೆ ೨ ಸಾವಿರ ಕೊಟ್ಟಿದ್ದಾಗಿ ಹೇಳುತ್ತಿದ್ದು, ಇವರ ಮನೆಯಿಂದಾ ದುಡ್ಡು ತಂದು ಕೊಟ್ಟಿರಾ ಎಂದು ನಾವು ಕೇಳಿದರೇ ಹೇಗೆ ಎಂದು ಪ್ರಶ್ನಿಸಿದರು.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

5 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago