ಮೈಸೂರು

ನಾನು ಮೋದಿ ಹೇಳಿದ ಕೆಲಸ ಮಾಡುವ ಮೇಸ್ತ್ರಿ: ಸಂಸದ ಪ್ರತಾಪ್‌ ಸಿಂಹ

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಸಂಸದ ಬುರುಡೆ ಬಿಡುತ್ತಾನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ ಸಿಂಹ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ನನ್ನ ರಸ್ತೆಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ರಸ್ತೆ. ನಾನು ಒಬ್ಬ ಮೇಸ್ತ್ರಿಯಷ್ಟೆ. ಮೋದಿ ಹೇಳಿದ ಕೆಲಸ ಮಾಡುವ ಮೇಸ್ತ್ರಿ. ಮುಖ್ಯಮಂತ್ರಿಯಾದವರು ಪದ ಪ್ರಯೋಗದಲ್ಲಿ ಎಚ್ಚರ ವಹಿಸಬೇಕು. ಎಲ್ಲರನ್ನೂ ತಾತ್ಸರದಿಂದ ಮಾತಾಡುವುದನ್ನು ನಿಲ್ಲಿಸಲಿ. ರಾಜಕೀಯ ಮಾಡಬೇಕು ಎಂದುಕೊಂಡವರು ಹೇಳಿಕೊಳ್ಳಲು ಏನೂ ಇಲ್ಲದಿದ್ದಾಗ ಈ ರೀತಿ ಕ್ರೆಡಿಟ್ ಪಾಲಿಟಿಕ್ಸ್ ಶುರು ಮಾಡುತ್ತಾರೆ’ ಎಂದು ತಿರುಗೇಟು ನೀಡಿದರು.

ಇದು ೮೫೦೦ ಕೋಟಿ ಯೋಜನೆಯಾಗಿದೆ. ಇದಕ್ಕೆ ಸಿದ್ದರಾಮಯ್ಯ ಸರ್ಕಾರದಿಂದ ೮ ರೂಪಾಯಿ ಬಂದಿದ್ದರು ಸಿದ್ದರಾಮಯ್ಯ-ಎಚ್‌.ಸಿ ಮಹದೇವಪ್ಪ ಜೋಡಿ ರಸ್ತೆ ಎಂದೇ ಹೆಸರಿಡೋಣ ಎಂದು ವ್ಯಂಗ್ಯವಾಡಿದರು.

ಯಾರು ಬುರುಡೆ ಬಿಡುತ್ತಿದ್ದಾರೆ, ಯಾರು ಖಾಲಿ ಡಬ್ಬ ಅಲ್ಲಾಡಿಸುತ್ತಿದ್ದಾರೆ ಎಂಬುದು ಆ ರಸ್ತೆಯಲ್ಲಿ ಓಡಾಡುತ್ತಿರುವ ಜನರಿಗೆ ಗೊತ್ತಿದೆ. ರಸ್ತೆಯಲ್ಲಿ ನೀರು ತುಂಬಿದಾಗ, ರಸ್ತೆಯಲ್ಲಿ ಅಪಘಾತ ಹೆಚ್ಚಾದಾಗ ಜನರು ಬೈದಿದ್ದು, ನನ್ನನ್ನೇ. ಎಲ್ಲ ಸಮಸ್ಯೆ ಪರಿಹರಿಸಿದ್ದು ಪ್ರತಾಪ್‌ ಸಿಂಹನೇ. ಸಮಸ್ಯೆ ಎದುರಾಗಿದ್ದಾಗ ಸಿದ್ದರಾಮಯ್ಯ, ಎಚ್‌.ಸಿ ಮಹದೇವಪ್ಪ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು.

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಪ್ರಸ್ತಾಪ ಸಂಬಂಧಿಸಿದಂತೆ, ಸಿದ್ದರಾಮಯ್ಯ ಪ್ರೀತಿ, ಅಭಿಮಾನ, ಗೌರವ ಮತ್ತು ನಿಷ್ಠೆ ಟಿಪ್ಪುಗೆ ಹೊರತು ಮಹಾರಾಜರಿಗಲ್ಲ. ಈಗಾಗಿಯೇ ನಮ್ಮ ಸರ್ಕಾರದ ಅವಧಿಯಲ್ಲಿ ಮಹಾರಾಜರ ಹೆಸರನ್ನು ನಿಲ್ದಾಣಕ್ಕೆ ಇಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿತ್ತು ಎಂದರು.

ಐಷಾರಾಮಿ ಜೆಟ್‌ನಲ್ಲಿ ಸಿದ್ದರಾಮಯ್ಯ ಪ್ರಯಾಣಿದ ಬಗ್ಗೆ ಪ್ರತಿಕ್ರಿಯಿಸಿ, ತಮ್ಮ ನಡೆ ಸಮರ್ಥಿಸಿಕೊಳ್ಳಲು ಸಿದ್ದರಾಮಯ್ಯ ಅವರು ಪ್ರಧಾನಿಯನ್ನು ಎಳೆದು ತಂದಿದ್ದಾರೆ. ದೇಶಕ್ಕೆ ಇರುವುದು ಒಬ್ಬರೇ ಪ್ರಧಾನಿ. ದೇಶದಲ್ಲಿ 29 ಜನ ಮುಖ್ಯಮಂತ್ರಗಳಿದ್ದಾರೆ. ನೀವು ಸುಮ್ಮನೆ ಪ್ರಧಾನಿಗೆ ಹೋಲಿಕೆ ಮಾಡಿಕೊಳ್ಳಬೇಡಿ ಎಂದು ಕುಟುಕಿದರು.

ಸಿದ್ದರಾಮಯ್ಯ ಮೈಸೂರು ಅಭಿವೃದ್ಧಿಯನ್ನು ಮಹಾರಾಜರು ತಮ್ಮ ಮನೆಯಿಂದ ದುಡ್ಡು ತಂದು ಮಾಡಿಲ್ಲವೆಂದು ಈ ಹಿಂದೆ ಹೇಳಿದ್ದರು. ಈಗ ಆಸ್ಪತ್ರ ನಾನು ಮಾಡಿದೆ. ಮನೆ ಯಜಮಾನಿಗೆ ೨ ಸಾವಿರ ಕೊಟ್ಟಿದ್ದಾಗಿ ಹೇಳುತ್ತಿದ್ದು, ಇವರ ಮನೆಯಿಂದಾ ದುಡ್ಡು ತಂದು ಕೊಟ್ಟಿರಾ ಎಂದು ನಾವು ಕೇಳಿದರೇ ಹೇಗೆ ಎಂದು ಪ್ರಶ್ನಿಸಿದರು.

andolanait

Recent Posts

ಸಿದ್ಧಗಂಗಾ ಶ್ರೀಗಳ ಜಯಂತಿ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…

1 hour ago

ರಷ್ಯಾದ ಸೇನಾ ವಿಮಾನ ಪತನ: 29 ಪ್ರಯಾಣಿಕರು ಸಾವು

ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾ ಸೇನಾ ವಿಮಾನ ಪತನಗೊಂಡ ಪರಿಣಾಮ 29 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಕ್ಷಣಾ ಸಚಿವಾಲಯದ…

1 hour ago

ಮುಂದಿನ 2-3 ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್:‌ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

2 hours ago

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…

3 hours ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

3 hours ago

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…

4 hours ago