ಮೈಸೂರು

ನಾನು ಮೋದಿ ಹೇಳಿದ ಕೆಲಸ ಮಾಡುವ ಮೇಸ್ತ್ರಿ: ಸಂಸದ ಪ್ರತಾಪ್‌ ಸಿಂಹ

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಸಂಸದ ಬುರುಡೆ ಬಿಡುತ್ತಾನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ ಸಿಂಹ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ನನ್ನ ರಸ್ತೆಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ರಸ್ತೆ. ನಾನು ಒಬ್ಬ ಮೇಸ್ತ್ರಿಯಷ್ಟೆ. ಮೋದಿ ಹೇಳಿದ ಕೆಲಸ ಮಾಡುವ ಮೇಸ್ತ್ರಿ. ಮುಖ್ಯಮಂತ್ರಿಯಾದವರು ಪದ ಪ್ರಯೋಗದಲ್ಲಿ ಎಚ್ಚರ ವಹಿಸಬೇಕು. ಎಲ್ಲರನ್ನೂ ತಾತ್ಸರದಿಂದ ಮಾತಾಡುವುದನ್ನು ನಿಲ್ಲಿಸಲಿ. ರಾಜಕೀಯ ಮಾಡಬೇಕು ಎಂದುಕೊಂಡವರು ಹೇಳಿಕೊಳ್ಳಲು ಏನೂ ಇಲ್ಲದಿದ್ದಾಗ ಈ ರೀತಿ ಕ್ರೆಡಿಟ್ ಪಾಲಿಟಿಕ್ಸ್ ಶುರು ಮಾಡುತ್ತಾರೆ’ ಎಂದು ತಿರುಗೇಟು ನೀಡಿದರು.

ಇದು ೮೫೦೦ ಕೋಟಿ ಯೋಜನೆಯಾಗಿದೆ. ಇದಕ್ಕೆ ಸಿದ್ದರಾಮಯ್ಯ ಸರ್ಕಾರದಿಂದ ೮ ರೂಪಾಯಿ ಬಂದಿದ್ದರು ಸಿದ್ದರಾಮಯ್ಯ-ಎಚ್‌.ಸಿ ಮಹದೇವಪ್ಪ ಜೋಡಿ ರಸ್ತೆ ಎಂದೇ ಹೆಸರಿಡೋಣ ಎಂದು ವ್ಯಂಗ್ಯವಾಡಿದರು.

ಯಾರು ಬುರುಡೆ ಬಿಡುತ್ತಿದ್ದಾರೆ, ಯಾರು ಖಾಲಿ ಡಬ್ಬ ಅಲ್ಲಾಡಿಸುತ್ತಿದ್ದಾರೆ ಎಂಬುದು ಆ ರಸ್ತೆಯಲ್ಲಿ ಓಡಾಡುತ್ತಿರುವ ಜನರಿಗೆ ಗೊತ್ತಿದೆ. ರಸ್ತೆಯಲ್ಲಿ ನೀರು ತುಂಬಿದಾಗ, ರಸ್ತೆಯಲ್ಲಿ ಅಪಘಾತ ಹೆಚ್ಚಾದಾಗ ಜನರು ಬೈದಿದ್ದು, ನನ್ನನ್ನೇ. ಎಲ್ಲ ಸಮಸ್ಯೆ ಪರಿಹರಿಸಿದ್ದು ಪ್ರತಾಪ್‌ ಸಿಂಹನೇ. ಸಮಸ್ಯೆ ಎದುರಾಗಿದ್ದಾಗ ಸಿದ್ದರಾಮಯ್ಯ, ಎಚ್‌.ಸಿ ಮಹದೇವಪ್ಪ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು.

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಪ್ರಸ್ತಾಪ ಸಂಬಂಧಿಸಿದಂತೆ, ಸಿದ್ದರಾಮಯ್ಯ ಪ್ರೀತಿ, ಅಭಿಮಾನ, ಗೌರವ ಮತ್ತು ನಿಷ್ಠೆ ಟಿಪ್ಪುಗೆ ಹೊರತು ಮಹಾರಾಜರಿಗಲ್ಲ. ಈಗಾಗಿಯೇ ನಮ್ಮ ಸರ್ಕಾರದ ಅವಧಿಯಲ್ಲಿ ಮಹಾರಾಜರ ಹೆಸರನ್ನು ನಿಲ್ದಾಣಕ್ಕೆ ಇಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿತ್ತು ಎಂದರು.

ಐಷಾರಾಮಿ ಜೆಟ್‌ನಲ್ಲಿ ಸಿದ್ದರಾಮಯ್ಯ ಪ್ರಯಾಣಿದ ಬಗ್ಗೆ ಪ್ರತಿಕ್ರಿಯಿಸಿ, ತಮ್ಮ ನಡೆ ಸಮರ್ಥಿಸಿಕೊಳ್ಳಲು ಸಿದ್ದರಾಮಯ್ಯ ಅವರು ಪ್ರಧಾನಿಯನ್ನು ಎಳೆದು ತಂದಿದ್ದಾರೆ. ದೇಶಕ್ಕೆ ಇರುವುದು ಒಬ್ಬರೇ ಪ್ರಧಾನಿ. ದೇಶದಲ್ಲಿ 29 ಜನ ಮುಖ್ಯಮಂತ್ರಗಳಿದ್ದಾರೆ. ನೀವು ಸುಮ್ಮನೆ ಪ್ರಧಾನಿಗೆ ಹೋಲಿಕೆ ಮಾಡಿಕೊಳ್ಳಬೇಡಿ ಎಂದು ಕುಟುಕಿದರು.

ಸಿದ್ದರಾಮಯ್ಯ ಮೈಸೂರು ಅಭಿವೃದ್ಧಿಯನ್ನು ಮಹಾರಾಜರು ತಮ್ಮ ಮನೆಯಿಂದ ದುಡ್ಡು ತಂದು ಮಾಡಿಲ್ಲವೆಂದು ಈ ಹಿಂದೆ ಹೇಳಿದ್ದರು. ಈಗ ಆಸ್ಪತ್ರ ನಾನು ಮಾಡಿದೆ. ಮನೆ ಯಜಮಾನಿಗೆ ೨ ಸಾವಿರ ಕೊಟ್ಟಿದ್ದಾಗಿ ಹೇಳುತ್ತಿದ್ದು, ಇವರ ಮನೆಯಿಂದಾ ದುಡ್ಡು ತಂದು ಕೊಟ್ಟಿರಾ ಎಂದು ನಾವು ಕೇಳಿದರೇ ಹೇಗೆ ಎಂದು ಪ್ರಶ್ನಿಸಿದರು.

andolanait

Recent Posts

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

2 mins ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

20 mins ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

43 mins ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

53 mins ago

ಹಾಸನ: ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿರಾಯ

ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ…

1 hour ago

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಪ್ರಕರಣ: ಜ.22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ…

1 hour ago