ಮೈಸೂರು

ನಾನು ಮೋದಿ ಹೇಳಿದ ಕೆಲಸ ಮಾಡುವ ಮೇಸ್ತ್ರಿ: ಸಂಸದ ಪ್ರತಾಪ್‌ ಸಿಂಹ

ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಸಂಸದ ಬುರುಡೆ ಬಿಡುತ್ತಾನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ ಸಿಂಹ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ನನ್ನ ರಸ್ತೆಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ರಸ್ತೆ. ನಾನು ಒಬ್ಬ ಮೇಸ್ತ್ರಿಯಷ್ಟೆ. ಮೋದಿ ಹೇಳಿದ ಕೆಲಸ ಮಾಡುವ ಮೇಸ್ತ್ರಿ. ಮುಖ್ಯಮಂತ್ರಿಯಾದವರು ಪದ ಪ್ರಯೋಗದಲ್ಲಿ ಎಚ್ಚರ ವಹಿಸಬೇಕು. ಎಲ್ಲರನ್ನೂ ತಾತ್ಸರದಿಂದ ಮಾತಾಡುವುದನ್ನು ನಿಲ್ಲಿಸಲಿ. ರಾಜಕೀಯ ಮಾಡಬೇಕು ಎಂದುಕೊಂಡವರು ಹೇಳಿಕೊಳ್ಳಲು ಏನೂ ಇಲ್ಲದಿದ್ದಾಗ ಈ ರೀತಿ ಕ್ರೆಡಿಟ್ ಪಾಲಿಟಿಕ್ಸ್ ಶುರು ಮಾಡುತ್ತಾರೆ’ ಎಂದು ತಿರುಗೇಟು ನೀಡಿದರು.

ಇದು ೮೫೦೦ ಕೋಟಿ ಯೋಜನೆಯಾಗಿದೆ. ಇದಕ್ಕೆ ಸಿದ್ದರಾಮಯ್ಯ ಸರ್ಕಾರದಿಂದ ೮ ರೂಪಾಯಿ ಬಂದಿದ್ದರು ಸಿದ್ದರಾಮಯ್ಯ-ಎಚ್‌.ಸಿ ಮಹದೇವಪ್ಪ ಜೋಡಿ ರಸ್ತೆ ಎಂದೇ ಹೆಸರಿಡೋಣ ಎಂದು ವ್ಯಂಗ್ಯವಾಡಿದರು.

ಯಾರು ಬುರುಡೆ ಬಿಡುತ್ತಿದ್ದಾರೆ, ಯಾರು ಖಾಲಿ ಡಬ್ಬ ಅಲ್ಲಾಡಿಸುತ್ತಿದ್ದಾರೆ ಎಂಬುದು ಆ ರಸ್ತೆಯಲ್ಲಿ ಓಡಾಡುತ್ತಿರುವ ಜನರಿಗೆ ಗೊತ್ತಿದೆ. ರಸ್ತೆಯಲ್ಲಿ ನೀರು ತುಂಬಿದಾಗ, ರಸ್ತೆಯಲ್ಲಿ ಅಪಘಾತ ಹೆಚ್ಚಾದಾಗ ಜನರು ಬೈದಿದ್ದು, ನನ್ನನ್ನೇ. ಎಲ್ಲ ಸಮಸ್ಯೆ ಪರಿಹರಿಸಿದ್ದು ಪ್ರತಾಪ್‌ ಸಿಂಹನೇ. ಸಮಸ್ಯೆ ಎದುರಾಗಿದ್ದಾಗ ಸಿದ್ದರಾಮಯ್ಯ, ಎಚ್‌.ಸಿ ಮಹದೇವಪ್ಪ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು.

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಪ್ರಸ್ತಾಪ ಸಂಬಂಧಿಸಿದಂತೆ, ಸಿದ್ದರಾಮಯ್ಯ ಪ್ರೀತಿ, ಅಭಿಮಾನ, ಗೌರವ ಮತ್ತು ನಿಷ್ಠೆ ಟಿಪ್ಪುಗೆ ಹೊರತು ಮಹಾರಾಜರಿಗಲ್ಲ. ಈಗಾಗಿಯೇ ನಮ್ಮ ಸರ್ಕಾರದ ಅವಧಿಯಲ್ಲಿ ಮಹಾರಾಜರ ಹೆಸರನ್ನು ನಿಲ್ದಾಣಕ್ಕೆ ಇಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿತ್ತು ಎಂದರು.

ಐಷಾರಾಮಿ ಜೆಟ್‌ನಲ್ಲಿ ಸಿದ್ದರಾಮಯ್ಯ ಪ್ರಯಾಣಿದ ಬಗ್ಗೆ ಪ್ರತಿಕ್ರಿಯಿಸಿ, ತಮ್ಮ ನಡೆ ಸಮರ್ಥಿಸಿಕೊಳ್ಳಲು ಸಿದ್ದರಾಮಯ್ಯ ಅವರು ಪ್ರಧಾನಿಯನ್ನು ಎಳೆದು ತಂದಿದ್ದಾರೆ. ದೇಶಕ್ಕೆ ಇರುವುದು ಒಬ್ಬರೇ ಪ್ರಧಾನಿ. ದೇಶದಲ್ಲಿ 29 ಜನ ಮುಖ್ಯಮಂತ್ರಗಳಿದ್ದಾರೆ. ನೀವು ಸುಮ್ಮನೆ ಪ್ರಧಾನಿಗೆ ಹೋಲಿಕೆ ಮಾಡಿಕೊಳ್ಳಬೇಡಿ ಎಂದು ಕುಟುಕಿದರು.

ಸಿದ್ದರಾಮಯ್ಯ ಮೈಸೂರು ಅಭಿವೃದ್ಧಿಯನ್ನು ಮಹಾರಾಜರು ತಮ್ಮ ಮನೆಯಿಂದ ದುಡ್ಡು ತಂದು ಮಾಡಿಲ್ಲವೆಂದು ಈ ಹಿಂದೆ ಹೇಳಿದ್ದರು. ಈಗ ಆಸ್ಪತ್ರ ನಾನು ಮಾಡಿದೆ. ಮನೆ ಯಜಮಾನಿಗೆ ೨ ಸಾವಿರ ಕೊಟ್ಟಿದ್ದಾಗಿ ಹೇಳುತ್ತಿದ್ದು, ಇವರ ಮನೆಯಿಂದಾ ದುಡ್ಡು ತಂದು ಕೊಟ್ಟಿರಾ ಎಂದು ನಾವು ಕೇಳಿದರೇ ಹೇಗೆ ಎಂದು ಪ್ರಶ್ನಿಸಿದರು.

andolanait

Recent Posts

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

40 mins ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

6 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

6 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

6 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

7 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

9 hours ago