ಮೈಸೂರು : ನಾನು ಮೈಸೂರು, ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮೈಸೂರು-ಕೊಡಗು ‘ಕೈ’ ಟಿಕೆಟ್ಗೆ ಬೇಡಿಕೆ ಇಟ್ಟಿದ್ದಾರೆ. ನಾನು ಟೆಕ್ನಿಕಲಿ ಬಿಜೆಪಿಯಲ್ಲಿದ್ದೇನೆ. ನನಗೆ ಟಿಕೆಟ್ ನೀಡಿದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುವೆ.
ಸಿದ್ದರಾಮಯ್ಯ ನೀವು ಬಿಜೆಪಿಯಲ್ಲಿ ಇದ್ದೀರಾ ಹೇಗೆ ಅಂತಾ ಕೇಳಿದರು. ಅದಕ್ಕೆ ನಾನು ಎಲ್ಲವನ್ನೂ ವಿವರಿಸಿದ್ದೇನೆ ಎಂದು ಹೇಳಿದ್ದರು.
ಮುದ್ದು ಹನುಮೇಗೌಡರಿಗೂ ಟಿಕೆಟ್ ನೀಡಲಾಗುತ್ತಿದೆ. ಅದೇ ರೀತಿ ನನಗೂ ನೀಡಬಹುದು ಅಂತಾ ತಿಳಿಸಿದ್ದೇನೆ. ಸಿಎಂ ಸಿದ್ದರಾಮಯ್ಯ ನೋಡೋಣ ಅಂತಾ ಹೇಳಿದ್ದಾರೆ. ಒಂದು ವೇಳೆ ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸ ಇದೆ ಎಂದಿದ್ದಾರೆ.
ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.
ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.
ಸಂಸದ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಕೈತಪ್ಪುವ ವಿಚಾರವಾಗಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳಿಗಿಂತ ನಡವಳಿಕೆಗಳು ಮುಖ್ಯವಾಗುತ್ತೆ. ಪ್ರತಾಪ್ ಅವರ ಈ ಪರಿಸ್ಥಿತಿಗೆ ಅವರ ನಡವಳಿಕೆ ಕಾರಣ. ಪ್ರತಾಪ್ ಸಿಂಹ ನಡೆದುಕೊಂಡ ರೀತಿಯಿಂದ ಹೀಗಾಗಿದೆ ಎಂದು ಹೇಳಿದ್ದಾರೆ
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…
ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…