ಮೈಸೂರು

ನಾನು ಮೈಸೂರು-ಕೊಡಗು ಲೋಕಸಭಾ ಟಿಕೆಟ್‌ ಆಕಾಂಕ್ಷಿ : ಹೆಚ್‌.ವಿಶ್ವನಾಥ್‌

ಮೈಸೂರು : ನಾನು ಮೈಸೂರು, ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ಮೈಸೂರು-ಕೊಡಗು ‘ಕೈ’​​ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದಾರೆ. ನಾನು ಟೆಕ್ನಿಕಲಿ ಬಿಜೆಪಿಯಲ್ಲಿದ್ದೇನೆ. ನನಗೆ ಟಿಕೆಟ್ ನೀಡಿದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುವೆ.

ಸಿದ್ದರಾಮಯ್ಯ ನೀವು ಬಿಜೆಪಿಯಲ್ಲಿ ಇದ್ದೀರಾ ಹೇಗೆ ಅಂತಾ ಕೇಳಿದರು. ಅದಕ್ಕೆ ನಾನು ಎಲ್ಲವನ್ನೂ ವಿವರಿಸಿದ್ದೇನೆ ಎಂದು ಹೇಳಿದ್ದರು.

ಮುದ್ದು ಹನುಮೇಗೌಡರಿಗೂ ಟಿಕೆಟ್ ನೀಡಲಾಗುತ್ತಿದೆ. ಅದೇ ರೀತಿ ನನಗೂ ನೀಡಬಹುದು ಅಂತಾ ತಿಳಿಸಿದ್ದೇನೆ. ಸಿಎಂ ಸಿದ್ದರಾಮಯ್ಯ ನೋಡೋಣ ಅಂತಾ ಹೇಳಿದ್ದಾರೆ. ಒಂದು ವೇಳೆ ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸ ಇದೆ ಎಂದಿದ್ದಾರೆ.

ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.

ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.

ಸಂಸದ ಪ್ರತಾಪ್​​ ಸಿಂಹಗೆ ಬಿಜೆಪಿ ಟಿಕೆಟ್ ಕೈತಪ್ಪುವ ವಿಚಾರವಾಗಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳಿಗಿಂತ ನಡವಳಿಕೆಗಳು ಮುಖ್ಯವಾಗುತ್ತೆ. ಪ್ರತಾಪ್ ಅವರ ಈ ಪರಿಸ್ಥಿತಿಗೆ ಅವರ ನಡವಳಿಕೆ ಕಾರಣ. ಪ್ರತಾಪ್​ ಸಿಂಹ ನಡೆದುಕೊಂಡ ರೀತಿಯಿಂದ ಹೀಗಾಗಿದೆ ಎಂದು ಹೇಳಿದ್ದಾರೆ

andolanait

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

3 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

3 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

3 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

3 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

4 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

4 hours ago