ಮೈಸೂರು

ಪ್ರಜ್ವಲ್‌ ಪರ ನಾನಿಲ್ಲ, ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ: ಎಚ್.ಡಿ ಕುಮಾರಸ್ವಾಮಿ

ಮೈಸೂರು: ಸಂಸದ ಪ್ರಜ್ವಲ್‌ ರೇವಣ್ಣ ಪರವಾಗಿ ನಾನಿಲ್ಲ. ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ. ಕಾಂಗ್ರೆಸ್‌ ಈ ವಿಚಾರದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಮುಖ್ಯಮಂತ್ರಿಗಳೇ ಅಧಿಕಾರ ಶಾಶ್ವತವಲ್ಲ. ನಿಮ್ಮ ಅಧಿಕಾರಿ ದುರುಪಯೋಗದ ವಿರುದ್ಧ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ.

ಇಂದು (ಮೇ.22) ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಗೋಷ್ಠಿ ನಡೆಸಿ ಮಾತನಾಡಿದ ಅವರು, ವಿರೋಧಿಗಳಿಗೆ ತೊಂದರೆ ನೀಡುವುದು. ದ್ವೇಷದ ರಾಜಕಾರಣ ಮಾಡುವುದಷ್ಟೆ ಸರ್ಕಾರದ ಕೆಲಸ ಆಗಿದೆ. ಸರ್ಕಾರದ ಪ್ರಯೋಜಕತ್ವದಲ್ಲಿ ಮೇ 30 ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ನನಗೆ ಹೇಳಿದ್ದರೆ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸುತ್ತಿದ್ದೇ ಎಂದು ಹಾರಿಹಾಯ್ದರು.

ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್‌ ಪೆನ್‌ಡ್ರೈವ್‌ ವಿತರಣೆ ಹಿಂದೆ ಇದ್ದಾರೆ. ಅರ್ಧ ನಿಮಿಷದಲ್ಲೆ ಎಲ್ಲವೂ ತೀರ್ಮಾನಾಗಿದೆ. ಪೊಲೀಸರ ರಕ್ಷಣೆಯಲ್ಲಿ ಎಂಟು ಜನ ಸೇರಿದಂತೆ ಕಾರ್ತಿಕ್‌ ಸಹ ಇದ್ದಾನೆ. ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್‌ ಬಂಧನವಾಗಿಲ್ಲ? ನ್ಯಾಯಾಲಯಕ್ಕೆ ಯಾಕೆ ಹಾಜರು ಪಡಿಸಿಲ್ಲ ಹೇಳಿ?  ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ನನಗೆ ಡಿಸಿಎಂ ಡಿಕೆ ಶಿವಕುಮಾರ್‌ ಕಂಡರೆ ಅಸೂಯೆ ಅಂತ ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡೆಯಲಿ. ಅಧಿಕಾರ ಯಾರ ಅಪ್ಪನ ಮನೆ ಆಸ್ತಿಯೂ ಅಲ್ಲ. ರಾಜಕೀಯದಲ್ಲಿ ಏಳು ಬೀಳು ಅದು ಭಗವಂತನ ಇಚ್ಚೆ. ಇದರಲ್ಲಿ ಅಸೂಯೆ ಯಾಕೆ, ಪ್ರಧಾನಿ ಸ್ಥಾನವನ್ನೇ ಅತ್ಯಂತ ಸುಲಭವಾಗಿ ತೆರವು ಮಾಡಿದ ವಂಶ ನಮ್ಮದು. ಎಲ್ಲ ಅಧಿಕಾರವನ್ನು ನಾವು ನೋಡಿಯಾಗಿದೆ. ನಮಗೆ ಅಧಿಕಾರ ಬೇಡ ಅಂದರೂ ಬಂದಿದೆ. ನಾವು ಅಧಿಕಾರ ಹುಡುಕಿಕೊಂಡು ಹೋಗಿಲ್ಲ. ನಿಮಗೆ ಇದು ಗೊತ್ತಿರಲಿ ಎಂದು ಹೇಳಿದರು.

ಪೆನ್‌ಡ್ರೈವ್‌ನ ಮೂಲ ವ್ಯಕ್ತಿ ಕಾರ್ತಿಕ್ . ಈತ ಹಾಸನದ ಕಾಂಗ್ರೆಸ್‌ ಅಭ್ಯರ್ಥಿ ಇಟ್ಟುಕೊಂಡು ಡಿಕೆ ಸುರೇಶ್‌ ಹತ್ತಿರ ಮೊದಲು ಹೋಗಿದ್ದರು. ಬಳಿಕ ವಿಡಿಯೋಗಳನ್ನು ಸಿಡಿ ಶಿವಕುಮಾರ್‌ ಕಾಪಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ನನ್ನ ಬಳಿ ಇರುವ ಪೆನ್ಡ್ರೈವ್‌ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ್ದು. ಅದನ್ನು ನಾನು ಈಗ ಬಿಟ್ಟರೆ ಅದು ನನ್ನದೇ ಸೃಷ್ಟಿ ಅಂತ ನೀವು ಹೇಳುತ್ತೀರಿ. ಎಸ್ಐಟಿಗೆ ಇದುವರೆಗೂ ಕೊಟ್ಟ ಯಾವ ಪ್ರಕರಣ ತಾರ್ಕಿತ ಅಂತ್ಯ ಕಂಡಿದೆ ಹೇಳಿ? ನನ್ನ ಅವಧಿಯಲ್ಲಿ ಯಾವ ಪ್ರಕರಣವನ್ನು ಎಸ್‌ಐಟಿಗೆ ಕೊಟ್ಟಿರಲಿಲ್ಲ ಎಂದರು.

ಮೈತ್ರಿಗೂ ಪೆನ್‌ಡ್ರೈವ್‌ಗೂ ಸಂಬಂಧ ಇಲ್ಲ. ಪ್ರಜ್ವಲ್‌ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರಲಿಲ್ಲ ಇನ್ನೂ ಈಗ ಇರುತ್ತಾನಾ? ಪೆನ್‌ಡೈವ್‌ ಪ್ರಕರಣದಿಂದ ದೇವೇಗೌಡ ಕುಟುಂಬಕ್ಕೆ ಸ್ಪಲ್ಪ ಡ್ಯಾಮೇಜ್‌ ಆಗಿದೆ. ನಾನು ಈಗ ವಿದೇಶಕ್ಕೆ ಹೋದರೆ ಪ್ರಜ್ವಲ್ ರಕ್ಷಣೆಗೆ ಹೋಗಿದ್ದಾರೆ ಅಂತ ಇವರು ಸುದ್ದಿ ಹಬ್ಬಿಸಿ ಬಿಡುತ್ತಾರೆ. ಯಾವ ಕರ್ಮ ಗ್ರಹಚಾರ ನಮಗೆ. ಪ್ರಜ್ವಲ್ ವಿದೇಶಕ್ಕೆ ಹೋಗುವುದು ಅವತ್ತೆ ಗೊತ್ತಾಗಿದ್ದರೆ ನಾನು ಅವತ್ತೆ ಅವನನ್ನು ತಡೆಯುತ್ತಿದ್ದೆ. ಪ್ರಜ್ವಲ್ ಭಯ ಬಿದ್ದಿರಬಹುದು ಅದಕ್ಕೆ ಭಾರತಕ್ಕೆ ಬರುತ್ತಿಲ್ಲ. ವಕೀಲರ ಸಲಹೆ ಬೇಡ ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಸ್ಸು ಬಾ. ತಪ್ಪು ಮಾಡಿಲ್ಲ ಅನ್ನುವುದಾರೆ ಎದುರಿಸು. ತಪ್ಪು ಮಾಡಿದ್ದರೆ ಈ ನಾಡಿನ ಕಾನೂನು ಪ್ರಕಾರ ಶಿಕ್ಷೆ ಅನುಭವಿಸು ಎಂದು ಪ್ರಜ್ವಲ್‌ಗೆ  ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

7 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

8 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

9 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

9 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

9 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

10 hours ago