ಮೈಸೂರು

ಪ್ರಜ್ವಲ್‌ ಪರ ನಾನಿಲ್ಲ, ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ: ಎಚ್.ಡಿ ಕುಮಾರಸ್ವಾಮಿ

ಮೈಸೂರು: ಸಂಸದ ಪ್ರಜ್ವಲ್‌ ರೇವಣ್ಣ ಪರವಾಗಿ ನಾನಿಲ್ಲ. ಆತನ ತಪ್ಪು ಸಾಬೀತಾದರೆ ಶಿಕ್ಷೆ ಕೊಡಿ. ಕಾಂಗ್ರೆಸ್‌ ಈ ವಿಚಾರದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಮುಖ್ಯಮಂತ್ರಿಗಳೇ ಅಧಿಕಾರ ಶಾಶ್ವತವಲ್ಲ. ನಿಮ್ಮ ಅಧಿಕಾರಿ ದುರುಪಯೋಗದ ವಿರುದ್ಧ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ.

ಇಂದು (ಮೇ.22) ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಗೋಷ್ಠಿ ನಡೆಸಿ ಮಾತನಾಡಿದ ಅವರು, ವಿರೋಧಿಗಳಿಗೆ ತೊಂದರೆ ನೀಡುವುದು. ದ್ವೇಷದ ರಾಜಕಾರಣ ಮಾಡುವುದಷ್ಟೆ ಸರ್ಕಾರದ ಕೆಲಸ ಆಗಿದೆ. ಸರ್ಕಾರದ ಪ್ರಯೋಜಕತ್ವದಲ್ಲಿ ಮೇ 30 ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ನನಗೆ ಹೇಳಿದ್ದರೆ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸುತ್ತಿದ್ದೇ ಎಂದು ಹಾರಿಹಾಯ್ದರು.

ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್‌ ಪೆನ್‌ಡ್ರೈವ್‌ ವಿತರಣೆ ಹಿಂದೆ ಇದ್ದಾರೆ. ಅರ್ಧ ನಿಮಿಷದಲ್ಲೆ ಎಲ್ಲವೂ ತೀರ್ಮಾನಾಗಿದೆ. ಪೊಲೀಸರ ರಕ್ಷಣೆಯಲ್ಲಿ ಎಂಟು ಜನ ಸೇರಿದಂತೆ ಕಾರ್ತಿಕ್‌ ಸಹ ಇದ್ದಾನೆ. ಯಾವ ಕಾರಣಕ್ಕೆ ಇನ್ನೂ ಕಾರ್ತಿಕ್‌ ಬಂಧನವಾಗಿಲ್ಲ? ನ್ಯಾಯಾಲಯಕ್ಕೆ ಯಾಕೆ ಹಾಜರು ಪಡಿಸಿಲ್ಲ ಹೇಳಿ?  ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ನನಗೆ ಡಿಸಿಎಂ ಡಿಕೆ ಶಿವಕುಮಾರ್‌ ಕಂಡರೆ ಅಸೂಯೆ ಅಂತ ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡೆಯಲಿ. ಅಧಿಕಾರ ಯಾರ ಅಪ್ಪನ ಮನೆ ಆಸ್ತಿಯೂ ಅಲ್ಲ. ರಾಜಕೀಯದಲ್ಲಿ ಏಳು ಬೀಳು ಅದು ಭಗವಂತನ ಇಚ್ಚೆ. ಇದರಲ್ಲಿ ಅಸೂಯೆ ಯಾಕೆ, ಪ್ರಧಾನಿ ಸ್ಥಾನವನ್ನೇ ಅತ್ಯಂತ ಸುಲಭವಾಗಿ ತೆರವು ಮಾಡಿದ ವಂಶ ನಮ್ಮದು. ಎಲ್ಲ ಅಧಿಕಾರವನ್ನು ನಾವು ನೋಡಿಯಾಗಿದೆ. ನಮಗೆ ಅಧಿಕಾರ ಬೇಡ ಅಂದರೂ ಬಂದಿದೆ. ನಾವು ಅಧಿಕಾರ ಹುಡುಕಿಕೊಂಡು ಹೋಗಿಲ್ಲ. ನಿಮಗೆ ಇದು ಗೊತ್ತಿರಲಿ ಎಂದು ಹೇಳಿದರು.

ಪೆನ್‌ಡ್ರೈವ್‌ನ ಮೂಲ ವ್ಯಕ್ತಿ ಕಾರ್ತಿಕ್ . ಈತ ಹಾಸನದ ಕಾಂಗ್ರೆಸ್‌ ಅಭ್ಯರ್ಥಿ ಇಟ್ಟುಕೊಂಡು ಡಿಕೆ ಸುರೇಶ್‌ ಹತ್ತಿರ ಮೊದಲು ಹೋಗಿದ್ದರು. ಬಳಿಕ ವಿಡಿಯೋಗಳನ್ನು ಸಿಡಿ ಶಿವಕುಮಾರ್‌ ಕಾಪಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ನನ್ನ ಬಳಿ ಇರುವ ಪೆನ್ಡ್ರೈವ್‌ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ್ದು. ಅದನ್ನು ನಾನು ಈಗ ಬಿಟ್ಟರೆ ಅದು ನನ್ನದೇ ಸೃಷ್ಟಿ ಅಂತ ನೀವು ಹೇಳುತ್ತೀರಿ. ಎಸ್ಐಟಿಗೆ ಇದುವರೆಗೂ ಕೊಟ್ಟ ಯಾವ ಪ್ರಕರಣ ತಾರ್ಕಿತ ಅಂತ್ಯ ಕಂಡಿದೆ ಹೇಳಿ? ನನ್ನ ಅವಧಿಯಲ್ಲಿ ಯಾವ ಪ್ರಕರಣವನ್ನು ಎಸ್‌ಐಟಿಗೆ ಕೊಟ್ಟಿರಲಿಲ್ಲ ಎಂದರು.

ಮೈತ್ರಿಗೂ ಪೆನ್‌ಡ್ರೈವ್‌ಗೂ ಸಂಬಂಧ ಇಲ್ಲ. ಪ್ರಜ್ವಲ್‌ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರಲಿಲ್ಲ ಇನ್ನೂ ಈಗ ಇರುತ್ತಾನಾ? ಪೆನ್‌ಡೈವ್‌ ಪ್ರಕರಣದಿಂದ ದೇವೇಗೌಡ ಕುಟುಂಬಕ್ಕೆ ಸ್ಪಲ್ಪ ಡ್ಯಾಮೇಜ್‌ ಆಗಿದೆ. ನಾನು ಈಗ ವಿದೇಶಕ್ಕೆ ಹೋದರೆ ಪ್ರಜ್ವಲ್ ರಕ್ಷಣೆಗೆ ಹೋಗಿದ್ದಾರೆ ಅಂತ ಇವರು ಸುದ್ದಿ ಹಬ್ಬಿಸಿ ಬಿಡುತ್ತಾರೆ. ಯಾವ ಕರ್ಮ ಗ್ರಹಚಾರ ನಮಗೆ. ಪ್ರಜ್ವಲ್ ವಿದೇಶಕ್ಕೆ ಹೋಗುವುದು ಅವತ್ತೆ ಗೊತ್ತಾಗಿದ್ದರೆ ನಾನು ಅವತ್ತೆ ಅವನನ್ನು ತಡೆಯುತ್ತಿದ್ದೆ. ಪ್ರಜ್ವಲ್ ಭಯ ಬಿದ್ದಿರಬಹುದು ಅದಕ್ಕೆ ಭಾರತಕ್ಕೆ ಬರುತ್ತಿಲ್ಲ. ವಕೀಲರ ಸಲಹೆ ಬೇಡ ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಸ್ಸು ಬಾ. ತಪ್ಪು ಮಾಡಿಲ್ಲ ಅನ್ನುವುದಾರೆ ಎದುರಿಸು. ತಪ್ಪು ಮಾಡಿದ್ದರೆ ಈ ನಾಡಿನ ಕಾನೂನು ಪ್ರಕಾರ ಶಿಕ್ಷೆ ಅನುಭವಿಸು ಎಂದು ಪ್ರಜ್ವಲ್‌ಗೆ  ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

3 mins ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

3 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

4 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

5 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

5 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

5 hours ago