ಮೈಸೂರು

ಟಿಕೆಟ್‌ ಕೈತಪ್ಪಿದೆ ಕೆಲಸಕ್ಕಾಗಿ ಇವನಿಗೆ ಹೇಗೆ ಕರೆ ಮಾಡುವುದು ಎಂದು ಅಂಜಬೇಡಿ: ಪ್ರತಾಪ್‌ ಸಿಂಹ

ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ನಿನ್ನೆ ( ಮಾರ್ಚ್‌ 13 ) ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಗೊಳಿಸಿದೆ. ಮೈಸೂರು – ಕೊಡಗು ಕ್ಷೇತ್ರದ ಟಿಕೆಟ್‌ ಅನ್ನು ಯದುವೀರ್‌ ಒಡೆಯರ್ ಅವರಿಗೆ ನೀಡಲಾಗಿದ್ದು, ಹಾಲಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಕೈತಪ್ಪಿದೆ.

ಇನ್ನು ಟಿಕೆಟ್‌ ಘೋಷಣೆಯಾಗುವ ಮುನ್ನವೇ ಟಿಕೆಟ್‌ ಯಾರಿಗೆ ಸಿಕ್ಕರೂ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ಘೋಷಿಸಿದ್ದ ಪ್ರತಾಪ್‌ ಸಿಂಹ ಟಿಕೆಟ್‌ ಕೈತಪ್ಪಿದ ಬಳಿಕವೂ ಸಹ ಅದೇ ಮಾತುಗಳನ್ನು ಆಡಿದ್ದರು. ಇನ್ನು ಇಂದು ( ಮಾರ್ಚ್‌ 14 ) ಈ ಕುರಿತಾಗಿ ಮತ್ತೊಂದು ಟ್ವೀಟ್‌ ಮಾಡಿರುವ ಪ್ರತಾಪ್‌ ಸಿಂಹ “ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ ಮಾಡುವುದು ಎಂದು ಅಂಜಬೇಡಿ, ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ. ಸೋಮವಾರದಿಂದ ಪ್ರಚಾರ ಕಾರ್ಯಕ್ಕೆ ಬರುತ್ತೇನೆ” ಎಂದು ಬರೆದುಕೊಂಡಿದ್ದಾರೆ.

andolana

Recent Posts

ಹೊಸ ವರ್ಷ ಆಚರಣೆಗೆ ಜನರ ಪ್ರವಾಸ: ಕರ್ನಾಟಕದ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ

ಬೆಂಗಳೂರು: ಹೊಸ ವರ್ಷದ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ. ಕರ್ನಾಟಕದ ಪ್ರವಾಸಿ ತಾಣಗಳು ಜನ ಜಂಗುಳಿಯಿಂದ ತುಂಬಿ…

25 mins ago

ಅರಮನೆ ಬಳಿ ಹೀಲಿಯಂ ಸ್ಫೋಟ ಪ್ರಕರಣ: ಎನ್‌ಐಎ ತನಿಖೆಗೆ ಪ್ರಮೋದ್‌ ಮುತಾಲಿಕ್‌ ಆಗ್ರಹ

ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದು,…

1 hour ago

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…

2 hours ago

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…

2 hours ago

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

3 hours ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

3 hours ago