ಮೈಸೂರು

ಟಿಕೆಟ್‌ ಕೈತಪ್ಪಿದೆ ಕೆಲಸಕ್ಕಾಗಿ ಇವನಿಗೆ ಹೇಗೆ ಕರೆ ಮಾಡುವುದು ಎಂದು ಅಂಜಬೇಡಿ: ಪ್ರತಾಪ್‌ ಸಿಂಹ

ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ನಿನ್ನೆ ( ಮಾರ್ಚ್‌ 13 ) ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಗೊಳಿಸಿದೆ. ಮೈಸೂರು – ಕೊಡಗು ಕ್ಷೇತ್ರದ ಟಿಕೆಟ್‌ ಅನ್ನು ಯದುವೀರ್‌ ಒಡೆಯರ್ ಅವರಿಗೆ ನೀಡಲಾಗಿದ್ದು, ಹಾಲಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಕೈತಪ್ಪಿದೆ.

ಇನ್ನು ಟಿಕೆಟ್‌ ಘೋಷಣೆಯಾಗುವ ಮುನ್ನವೇ ಟಿಕೆಟ್‌ ಯಾರಿಗೆ ಸಿಕ್ಕರೂ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ಘೋಷಿಸಿದ್ದ ಪ್ರತಾಪ್‌ ಸಿಂಹ ಟಿಕೆಟ್‌ ಕೈತಪ್ಪಿದ ಬಳಿಕವೂ ಸಹ ಅದೇ ಮಾತುಗಳನ್ನು ಆಡಿದ್ದರು. ಇನ್ನು ಇಂದು ( ಮಾರ್ಚ್‌ 14 ) ಈ ಕುರಿತಾಗಿ ಮತ್ತೊಂದು ಟ್ವೀಟ್‌ ಮಾಡಿರುವ ಪ್ರತಾಪ್‌ ಸಿಂಹ “ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ ಮಾಡುವುದು ಎಂದು ಅಂಜಬೇಡಿ, ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ. ಸೋಮವಾರದಿಂದ ಪ್ರಚಾರ ಕಾರ್ಯಕ್ಕೆ ಬರುತ್ತೇನೆ” ಎಂದು ಬರೆದುಕೊಂಡಿದ್ದಾರೆ.

andolana

Recent Posts

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

49 seconds ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

41 mins ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

2 hours ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

3 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

4 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

4 hours ago