ಮೈಸೂರು

ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ: ಸಿದ್ದರಾಮಯ್ಯ

ವರುಣಾ: ಮುಡಾ ಪ್ರಕರಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಸದ್ಯ ವಿರೋಧ ಪಕ್ಷಗಳು ಟೀಕೆಗಳ ಸುರಿಮಳೆಗೈಯ್ಯುತ್ತಿವೆ. ಸಿದ್ದರಾಮಯ್ಯ ಮುಡಾ ಮೂಲಕ ಅಕ್ರಮವಾಗಿ ಹಣ ಗಳಿಸಿದ್ದಾರೆ ಎಂಬ ಆರೋಪವಿದೆ. ಹೀಗೆ ಬಿಜೆಪಿ ಹಾಗೂ ಜೆಡಿಎಸ್‌ ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ನಾನು ಲಂಚ ಪಡೆದ ಉದಾಹರಣೆ ಇದೆಯಾ, ನನ್ನ ಮೇಲಿನ ಸುಳ್ಳು ಆರೋಪ ಸಹಿಸ್ತೀರಾ ಎಂದು ಸ್ವಕ್ಷೇತ್ರ ವರುಣದ ಮತದಾರರಿಗೆ ಪ್ರಶ್ನೆ ಹಾಕಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದ ಅವರು ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ ಎಂದು ಮರು ಪ್ರಶ್ನಿಸಿದರು.

ನಾನು ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ 3 ವರ್ಷದಿಂದ ಮನೆ ಕಟ್ಟುತ್ತಲೇ ಇದ್ದೀನಿ. ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು. ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ ಎಂದರು. ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದರು. ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಚಿವರುಗಳಾದ ಕೆ.ವೆಂಕಟೇಶ್, ರಹೀಂಖಾನ್, ಬೋಸ್ ರಾಜ್, ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಿಧಾನಸಭೆ ಮತ್ತು ವಿಧಾನ‌ ಪರಿಷತ್ ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ತಿಮ್ಮಯ್ಯ, ವರುಣಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಸೇರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

9 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

9 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

10 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

11 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

15 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

15 hours ago