ಮೈಸೂರು: ನಗರದಲ್ಲಿಂದು ಜನ ಸ್ಪಂದನಾ ಮತ್ತು ಮಾನವ ಮಂಟಪದಲ್ಲಿ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಅಂತರ್ಜಾತಿ ವಿವಾಹ ಆಗುವ ಬಯಕೆ ಹೊಂದಿದ್ದರು ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ನಾನು ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆಯಾಗಬೇಕು ಎಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಇದರಿಂದಾಗಿ ನಾನು ಮದುವೆಯಾಗಲಿಲ್ಲ. ಕೊನೆಗೆ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆಯಾಗಬೇಕಾಯಿತು ಎಂದು ತಮ್ಮ ಕಾಲೇಜು ದಿನಗಳಲ್ಲಿ ಅರಳಿದ್ದ ತಮ್ಮ ಪ್ರೇಮಾಂಕುರ ವಿಷಯವನ್ನು ಸಿಎಂ ಸಿದ್ದರಾಮಯ್ಯ ಮೆಲುಕು ಹಾಕಿದ್ದಾರೆ.
ಅಂತರ್ಜಾತಿ ವಿವಾಹಗಳಿಂದ ಮಾತ್ರ ಜಾತಿ ನಾಶ ಸಾಧ್ಯ. ಅಂಬೇಡ್ಕರ್, ಕುವೆಂಪು ಆಶಯದಂತೆ ಸಮ ಸಮಾಜ ನಿರ್ಮಾಣ ಮಾಡಬೇಕಾದರೇ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಇದಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…