ಮೈಸೂರು

ಭೌತಶಾಸ್ತ್ರ ವಿಭಾಗದ ಬಗ್ಗೆ ನನಗೆ ಮೊದಲಿನಿಂದಲೂ ಒಲವು-ಪ್ರೊ.ಹೇಮಂತ್ ಕುಮಾರ್

ಮೈಸೂರು : ನಾನು ಅಧ್ಯಯನ ಮಾಡುತ್ತಿದ್ದ ಸಮಯದಿಂದಲೂ ನನಗೆ ಭೌತಶಾಸ್ತ್ರ ವಿಭಾಗದ ಮೇಲೆ ಏನೋ ಒಲವು ಇತ್ತು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.

ಮಾನಸ ಗಂಗೋತ್ರಿ ಭೌತಶಾಸ್ತ್ರದ ಅಧ್ಯಯನ ವಿಭಾಗದಲ್ಲಿ ರೂಸಾ ಅನುದಾನದಡಿ ನವೀಕರಿಸಲಾದ ಐನ್ಸ್‌ ಸ್ಟೈನ್ ಆಡಿಟೋರಿಯಂ ಅನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ವಿವಿಯಲ್ಲಿ ಕೆಲಸ ಮಾಡುತ್ತಿದ್ದ ಸಾಕಷ್ಟು ಅಧ್ಯಾಪಕರಿಗೆ ಬಡ್ತಿ ಸಿಕ್ಕಿರಲಿಲ್ಲ. ಐದು-ಆರು ವರ್ಷದಿಂದ ವಿಳಂಬವಾಗಿತ್ತು. ನನ್ನ ಅವಧಿಯಲ್ಲಿ ಹೆಚ್ಚು ಮಂದಿಗೆ ಬಡ್ತಿ ನೀಡಿದ್ದೇನೆ. ಎಲ್ಲಾ ವಿಭಾಗದಲ್ಲೂ ಬಡ್ತಿ ನೀಡಿದ್ದೇನೆ. ಆ ಮೂಲಕ ಅಧ್ಯಾಪಕರು ಉತ್ಸಾಹದಿಂದ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದೇನೆ. ಇದು ನನಗೆ ಆತ್ಮತೃಪ್ತಿಯನ್ನೂ ನೀಡಿದೆ ಎಂದರು.

ನಾನು ಪಿಯುಸಿ ಮುಗಿದ ಮೇಲೆ ಎಂಜಿನಿಯರಿಂಗ್ ಮಾಡುವ ಒಲವಿತ್ತು. ಆಗ ಇದ್ದಿದ್ದೇ ರಾಜ್ಯದಲ್ಲಿ 14  ಎಂಜಿನಿಯರಿಂಗ್ ಕಾಲೇಜು. ನನಗೆ ಬಾಗಲಕೋಟೆಯಲ್ಲಿ ಸೀಟು ಸಿಕ್ಕಿದರೂ ನಾನು ಹೋಗಲಿಲ್ಲ. ಭೌತಶಾಸ್ತ್ರದಲ್ಲಿ ಎಂಎಸ್ಸಿ ಮಾಡುವ ಅಂತ ನಿರ್ಧರಿಸಿದೆ. ಅದಕ್ಕಾಗಿ  ಭೌತಶಾಸ್ತ್ರ ಪ್ರವೇಶ ಕೂಡ ಪಡೆದೆ. ಆದರೆ, ಸಣ್ಣ ಅಪಘಾತದಲ್ಲಿ ಕೈಗೆ ಗಾಯ ಮಾಡಿಕೊಂಡು ಪರೀಕ್ಷೆ ಬರೆಯಲು ಆಗಲಿಲ್ಲ. ನಂತರ ಬಿಇಡಿ ಮಾಡಿದೆ. ಜೊತೆಗೆ ಕಂಪ್ಯೂಟರ್ ಸೈನ್ಸ್‌ ನಲ್ಲಿ ಎಂಎಸ್ಸಿ ಮಾಡಿದೆ.ಹೀಗಾಗಿ ಭೌತಶಾಸ್ತ್ರದಲ್ಲಿ ಎಂಎಸ್ಸಿ ಮಾಡುವ ಕನಸು ನನಸಾಗಲಿಲ್ಲ ಎಂದರು.

ಕಂಪ್ಯೂಟರ್ ಸೈನ್ಸ್ ಓದಿ ಅಧ್ಯಾಪಕನಾದೆ, ಕುಲಪತಿಯಾದೆ. ಇದು ನನಗೆ ಎಲ್ಲವನನ್ನೂ ನೀಡಿದೆ. ಹಣ, ಹುದ್ದೆ, ಹೆಸರು ಎಲ್ಲಾ ನೀಡಿದೆ. ಆದರೂ ನನ್ನ ಮನಸ್ಸಲ್ಲಿ ಭೌತಶಾಸ್ತ್ರದ ಬಗ್ಗೆ ವಿಶೇಷ ಪ್ರೀತಿ ಇದೆ. ಖ್ಯಾತ ಪ್ರಾಧ್ಯಾಪಕರು ಈ ವಿಭಾಗದಲ್ಲಿ ಪಾಠ ಮಾಡಿದ್ದಾರೆ. ಸಣ್ಣ ವಿಭಾಗ ಇಂದು ದೊಡ್ಡದಾಗಿ ಬೆಳೆದಿದೆ. ಮಂಗಳೂರು, ಶಿವಮೊಗ್ಗದಿಂದ ಕೂಡ ಇಲ್ಲಿಗೆ ಓದಲು ವಿದ್ಯಾರ್ಥಿಗಳು ಬರುತ್ತಿದ್ದರು ಎಂದು ತಮ್ಮ ಹಳೆ ದಿನಗಳನ್ನು ಮೆಲುಕು ಹಾಕಿದರು.

ಕುಲಸಚಿವ ಪ್ರೊ.ಆರ್.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರೊ.ಎ.ಪಿ.ಜ್ಞಾನ ಪ್ರಕಾಶ್, ಪಿಎಂಇಬಿ ನಿರ್ದೇಶಕ ಪ್ರೊ.ಎನ್.ಕೆ.ಲೋಕನಾಥ್, ಪ್ರೊ. ಶ್ರೀಧರ್ ಸೇರಿದಂತೆ ಇತರರು ಇದ್ದರು.

 

andolana

Recent Posts

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…

38 mins ago

ಯುದ್ಧಕ್ಕೆ ನಾವು ಸದಾ ಸಿದ್ಧ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌…

1 hour ago

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…

1 hour ago

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…

2 hours ago

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…

3 hours ago

ಹನೂರು: ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶ್ರೀರೂಪ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…

3 hours ago