ಮೈಸೂರು

ಭೌತಶಾಸ್ತ್ರ ವಿಭಾಗದ ಬಗ್ಗೆ ನನಗೆ ಮೊದಲಿನಿಂದಲೂ ಒಲವು-ಪ್ರೊ.ಹೇಮಂತ್ ಕುಮಾರ್

ಮೈಸೂರು : ನಾನು ಅಧ್ಯಯನ ಮಾಡುತ್ತಿದ್ದ ಸಮಯದಿಂದಲೂ ನನಗೆ ಭೌತಶಾಸ್ತ್ರ ವಿಭಾಗದ ಮೇಲೆ ಏನೋ ಒಲವು ಇತ್ತು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.

ಮಾನಸ ಗಂಗೋತ್ರಿ ಭೌತಶಾಸ್ತ್ರದ ಅಧ್ಯಯನ ವಿಭಾಗದಲ್ಲಿ ರೂಸಾ ಅನುದಾನದಡಿ ನವೀಕರಿಸಲಾದ ಐನ್ಸ್‌ ಸ್ಟೈನ್ ಆಡಿಟೋರಿಯಂ ಅನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ವಿವಿಯಲ್ಲಿ ಕೆಲಸ ಮಾಡುತ್ತಿದ್ದ ಸಾಕಷ್ಟು ಅಧ್ಯಾಪಕರಿಗೆ ಬಡ್ತಿ ಸಿಕ್ಕಿರಲಿಲ್ಲ. ಐದು-ಆರು ವರ್ಷದಿಂದ ವಿಳಂಬವಾಗಿತ್ತು. ನನ್ನ ಅವಧಿಯಲ್ಲಿ ಹೆಚ್ಚು ಮಂದಿಗೆ ಬಡ್ತಿ ನೀಡಿದ್ದೇನೆ. ಎಲ್ಲಾ ವಿಭಾಗದಲ್ಲೂ ಬಡ್ತಿ ನೀಡಿದ್ದೇನೆ. ಆ ಮೂಲಕ ಅಧ್ಯಾಪಕರು ಉತ್ಸಾಹದಿಂದ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದೇನೆ. ಇದು ನನಗೆ ಆತ್ಮತೃಪ್ತಿಯನ್ನೂ ನೀಡಿದೆ ಎಂದರು.

ನಾನು ಪಿಯುಸಿ ಮುಗಿದ ಮೇಲೆ ಎಂಜಿನಿಯರಿಂಗ್ ಮಾಡುವ ಒಲವಿತ್ತು. ಆಗ ಇದ್ದಿದ್ದೇ ರಾಜ್ಯದಲ್ಲಿ 14  ಎಂಜಿನಿಯರಿಂಗ್ ಕಾಲೇಜು. ನನಗೆ ಬಾಗಲಕೋಟೆಯಲ್ಲಿ ಸೀಟು ಸಿಕ್ಕಿದರೂ ನಾನು ಹೋಗಲಿಲ್ಲ. ಭೌತಶಾಸ್ತ್ರದಲ್ಲಿ ಎಂಎಸ್ಸಿ ಮಾಡುವ ಅಂತ ನಿರ್ಧರಿಸಿದೆ. ಅದಕ್ಕಾಗಿ  ಭೌತಶಾಸ್ತ್ರ ಪ್ರವೇಶ ಕೂಡ ಪಡೆದೆ. ಆದರೆ, ಸಣ್ಣ ಅಪಘಾತದಲ್ಲಿ ಕೈಗೆ ಗಾಯ ಮಾಡಿಕೊಂಡು ಪರೀಕ್ಷೆ ಬರೆಯಲು ಆಗಲಿಲ್ಲ. ನಂತರ ಬಿಇಡಿ ಮಾಡಿದೆ. ಜೊತೆಗೆ ಕಂಪ್ಯೂಟರ್ ಸೈನ್ಸ್‌ ನಲ್ಲಿ ಎಂಎಸ್ಸಿ ಮಾಡಿದೆ.ಹೀಗಾಗಿ ಭೌತಶಾಸ್ತ್ರದಲ್ಲಿ ಎಂಎಸ್ಸಿ ಮಾಡುವ ಕನಸು ನನಸಾಗಲಿಲ್ಲ ಎಂದರು.

ಕಂಪ್ಯೂಟರ್ ಸೈನ್ಸ್ ಓದಿ ಅಧ್ಯಾಪಕನಾದೆ, ಕುಲಪತಿಯಾದೆ. ಇದು ನನಗೆ ಎಲ್ಲವನನ್ನೂ ನೀಡಿದೆ. ಹಣ, ಹುದ್ದೆ, ಹೆಸರು ಎಲ್ಲಾ ನೀಡಿದೆ. ಆದರೂ ನನ್ನ ಮನಸ್ಸಲ್ಲಿ ಭೌತಶಾಸ್ತ್ರದ ಬಗ್ಗೆ ವಿಶೇಷ ಪ್ರೀತಿ ಇದೆ. ಖ್ಯಾತ ಪ್ರಾಧ್ಯಾಪಕರು ಈ ವಿಭಾಗದಲ್ಲಿ ಪಾಠ ಮಾಡಿದ್ದಾರೆ. ಸಣ್ಣ ವಿಭಾಗ ಇಂದು ದೊಡ್ಡದಾಗಿ ಬೆಳೆದಿದೆ. ಮಂಗಳೂರು, ಶಿವಮೊಗ್ಗದಿಂದ ಕೂಡ ಇಲ್ಲಿಗೆ ಓದಲು ವಿದ್ಯಾರ್ಥಿಗಳು ಬರುತ್ತಿದ್ದರು ಎಂದು ತಮ್ಮ ಹಳೆ ದಿನಗಳನ್ನು ಮೆಲುಕು ಹಾಕಿದರು.

ಕುಲಸಚಿವ ಪ್ರೊ.ಆರ್.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರೊ.ಎ.ಪಿ.ಜ್ಞಾನ ಪ್ರಕಾಶ್, ಪಿಎಂಇಬಿ ನಿರ್ದೇಶಕ ಪ್ರೊ.ಎನ್.ಕೆ.ಲೋಕನಾಥ್, ಪ್ರೊ. ಶ್ರೀಧರ್ ಸೇರಿದಂತೆ ಇತರರು ಇದ್ದರು.

 

andolana

Recent Posts

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

20 mins ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

32 mins ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

34 mins ago

ಓದುಗರ ಪತ್ರ: ಪ್ರೇಕ್ಷಣೀಯ ಸ್ಥಳಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇರಲಿ

ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್…

36 mins ago

ಓದುಗರ ಪತ್ರ: ಕುವೆಂಪುನಗರ ಮಾರ್ಗಕ್ಕೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ…

38 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ನಿತಿನ್ ನೇಮಕ: ಬಿಜೆಪಿ ಹಿಡಿತ ಮೋದಿ, ಶಾ ಕೈಯಲ್ಲೇ

ಯಶಸ್ವಿ ರಾಜಕೀಯ ನಾಯಕತ್ವಕ್ಕೆ ಈಗ ಬೇಕಾಗಿರುವುದು ವರ್ಚಸ್ಸು ಮತ್ತು ಜನಪ್ರಿಯತೆ. ಈ ಗುಣಗಳಿದ್ದರೆ ಸರ್ಕಾರ ಮತ್ತು ಪಕ್ಷದಲ್ಲಿ ಏನು ಬೇಕಾದರೂ…

53 mins ago