ಮೈಸೂರು

ಭೌತಶಾಸ್ತ್ರ ವಿಭಾಗದ ಬಗ್ಗೆ ನನಗೆ ಮೊದಲಿನಿಂದಲೂ ಒಲವು-ಪ್ರೊ.ಹೇಮಂತ್ ಕುಮಾರ್

ಮೈಸೂರು : ನಾನು ಅಧ್ಯಯನ ಮಾಡುತ್ತಿದ್ದ ಸಮಯದಿಂದಲೂ ನನಗೆ ಭೌತಶಾಸ್ತ್ರ ವಿಭಾಗದ ಮೇಲೆ ಏನೋ ಒಲವು ಇತ್ತು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.

ಮಾನಸ ಗಂಗೋತ್ರಿ ಭೌತಶಾಸ್ತ್ರದ ಅಧ್ಯಯನ ವಿಭಾಗದಲ್ಲಿ ರೂಸಾ ಅನುದಾನದಡಿ ನವೀಕರಿಸಲಾದ ಐನ್ಸ್‌ ಸ್ಟೈನ್ ಆಡಿಟೋರಿಯಂ ಅನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ವಿವಿಯಲ್ಲಿ ಕೆಲಸ ಮಾಡುತ್ತಿದ್ದ ಸಾಕಷ್ಟು ಅಧ್ಯಾಪಕರಿಗೆ ಬಡ್ತಿ ಸಿಕ್ಕಿರಲಿಲ್ಲ. ಐದು-ಆರು ವರ್ಷದಿಂದ ವಿಳಂಬವಾಗಿತ್ತು. ನನ್ನ ಅವಧಿಯಲ್ಲಿ ಹೆಚ್ಚು ಮಂದಿಗೆ ಬಡ್ತಿ ನೀಡಿದ್ದೇನೆ. ಎಲ್ಲಾ ವಿಭಾಗದಲ್ಲೂ ಬಡ್ತಿ ನೀಡಿದ್ದೇನೆ. ಆ ಮೂಲಕ ಅಧ್ಯಾಪಕರು ಉತ್ಸಾಹದಿಂದ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದೇನೆ. ಇದು ನನಗೆ ಆತ್ಮತೃಪ್ತಿಯನ್ನೂ ನೀಡಿದೆ ಎಂದರು.

ನಾನು ಪಿಯುಸಿ ಮುಗಿದ ಮೇಲೆ ಎಂಜಿನಿಯರಿಂಗ್ ಮಾಡುವ ಒಲವಿತ್ತು. ಆಗ ಇದ್ದಿದ್ದೇ ರಾಜ್ಯದಲ್ಲಿ 14  ಎಂಜಿನಿಯರಿಂಗ್ ಕಾಲೇಜು. ನನಗೆ ಬಾಗಲಕೋಟೆಯಲ್ಲಿ ಸೀಟು ಸಿಕ್ಕಿದರೂ ನಾನು ಹೋಗಲಿಲ್ಲ. ಭೌತಶಾಸ್ತ್ರದಲ್ಲಿ ಎಂಎಸ್ಸಿ ಮಾಡುವ ಅಂತ ನಿರ್ಧರಿಸಿದೆ. ಅದಕ್ಕಾಗಿ  ಭೌತಶಾಸ್ತ್ರ ಪ್ರವೇಶ ಕೂಡ ಪಡೆದೆ. ಆದರೆ, ಸಣ್ಣ ಅಪಘಾತದಲ್ಲಿ ಕೈಗೆ ಗಾಯ ಮಾಡಿಕೊಂಡು ಪರೀಕ್ಷೆ ಬರೆಯಲು ಆಗಲಿಲ್ಲ. ನಂತರ ಬಿಇಡಿ ಮಾಡಿದೆ. ಜೊತೆಗೆ ಕಂಪ್ಯೂಟರ್ ಸೈನ್ಸ್‌ ನಲ್ಲಿ ಎಂಎಸ್ಸಿ ಮಾಡಿದೆ.ಹೀಗಾಗಿ ಭೌತಶಾಸ್ತ್ರದಲ್ಲಿ ಎಂಎಸ್ಸಿ ಮಾಡುವ ಕನಸು ನನಸಾಗಲಿಲ್ಲ ಎಂದರು.

ಕಂಪ್ಯೂಟರ್ ಸೈನ್ಸ್ ಓದಿ ಅಧ್ಯಾಪಕನಾದೆ, ಕುಲಪತಿಯಾದೆ. ಇದು ನನಗೆ ಎಲ್ಲವನನ್ನೂ ನೀಡಿದೆ. ಹಣ, ಹುದ್ದೆ, ಹೆಸರು ಎಲ್ಲಾ ನೀಡಿದೆ. ಆದರೂ ನನ್ನ ಮನಸ್ಸಲ್ಲಿ ಭೌತಶಾಸ್ತ್ರದ ಬಗ್ಗೆ ವಿಶೇಷ ಪ್ರೀತಿ ಇದೆ. ಖ್ಯಾತ ಪ್ರಾಧ್ಯಾಪಕರು ಈ ವಿಭಾಗದಲ್ಲಿ ಪಾಠ ಮಾಡಿದ್ದಾರೆ. ಸಣ್ಣ ವಿಭಾಗ ಇಂದು ದೊಡ್ಡದಾಗಿ ಬೆಳೆದಿದೆ. ಮಂಗಳೂರು, ಶಿವಮೊಗ್ಗದಿಂದ ಕೂಡ ಇಲ್ಲಿಗೆ ಓದಲು ವಿದ್ಯಾರ್ಥಿಗಳು ಬರುತ್ತಿದ್ದರು ಎಂದು ತಮ್ಮ ಹಳೆ ದಿನಗಳನ್ನು ಮೆಲುಕು ಹಾಕಿದರು.

ಕುಲಸಚಿವ ಪ್ರೊ.ಆರ್.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರೊ.ಎ.ಪಿ.ಜ್ಞಾನ ಪ್ರಕಾಶ್, ಪಿಎಂಇಬಿ ನಿರ್ದೇಶಕ ಪ್ರೊ.ಎನ್.ಕೆ.ಲೋಕನಾಥ್, ಪ್ರೊ. ಶ್ರೀಧರ್ ಸೇರಿದಂತೆ ಇತರರು ಇದ್ದರು.

 

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

16 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

16 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

16 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

16 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

16 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

17 hours ago