ಮೈಸೂರು : ನಾನು ಅಧ್ಯಯನ ಮಾಡುತ್ತಿದ್ದ ಸಮಯದಿಂದಲೂ ನನಗೆ ಭೌತಶಾಸ್ತ್ರ ವಿಭಾಗದ ಮೇಲೆ ಏನೋ ಒಲವು ಇತ್ತು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಮಾನಸ ಗಂಗೋತ್ರಿ ಭೌತಶಾಸ್ತ್ರದ ಅಧ್ಯಯನ ವಿಭಾಗದಲ್ಲಿ ರೂಸಾ ಅನುದಾನದಡಿ ನವೀಕರಿಸಲಾದ ಐನ್ಸ್ ಸ್ಟೈನ್ ಆಡಿಟೋರಿಯಂ ಅನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ವಿವಿಯಲ್ಲಿ ಕೆಲಸ ಮಾಡುತ್ತಿದ್ದ ಸಾಕಷ್ಟು ಅಧ್ಯಾಪಕರಿಗೆ ಬಡ್ತಿ ಸಿಕ್ಕಿರಲಿಲ್ಲ. ಐದು-ಆರು ವರ್ಷದಿಂದ ವಿಳಂಬವಾಗಿತ್ತು. ನನ್ನ ಅವಧಿಯಲ್ಲಿ ಹೆಚ್ಚು ಮಂದಿಗೆ ಬಡ್ತಿ ನೀಡಿದ್ದೇನೆ. ಎಲ್ಲಾ ವಿಭಾಗದಲ್ಲೂ ಬಡ್ತಿ ನೀಡಿದ್ದೇನೆ. ಆ ಮೂಲಕ ಅಧ್ಯಾಪಕರು ಉತ್ಸಾಹದಿಂದ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದೇನೆ. ಇದು ನನಗೆ ಆತ್ಮತೃಪ್ತಿಯನ್ನೂ ನೀಡಿದೆ ಎಂದರು.
ನಾನು ಪಿಯುಸಿ ಮುಗಿದ ಮೇಲೆ ಎಂಜಿನಿಯರಿಂಗ್ ಮಾಡುವ ಒಲವಿತ್ತು. ಆಗ ಇದ್ದಿದ್ದೇ ರಾಜ್ಯದಲ್ಲಿ 14 ಎಂಜಿನಿಯರಿಂಗ್ ಕಾಲೇಜು. ನನಗೆ ಬಾಗಲಕೋಟೆಯಲ್ಲಿ ಸೀಟು ಸಿಕ್ಕಿದರೂ ನಾನು ಹೋಗಲಿಲ್ಲ. ಭೌತಶಾಸ್ತ್ರದಲ್ಲಿ ಎಂಎಸ್ಸಿ ಮಾಡುವ ಅಂತ ನಿರ್ಧರಿಸಿದೆ. ಅದಕ್ಕಾಗಿ ಭೌತಶಾಸ್ತ್ರ ಪ್ರವೇಶ ಕೂಡ ಪಡೆದೆ. ಆದರೆ, ಸಣ್ಣ ಅಪಘಾತದಲ್ಲಿ ಕೈಗೆ ಗಾಯ ಮಾಡಿಕೊಂಡು ಪರೀಕ್ಷೆ ಬರೆಯಲು ಆಗಲಿಲ್ಲ. ನಂತರ ಬಿಇಡಿ ಮಾಡಿದೆ. ಜೊತೆಗೆ ಕಂಪ್ಯೂಟರ್ ಸೈನ್ಸ್ ನಲ್ಲಿ ಎಂಎಸ್ಸಿ ಮಾಡಿದೆ.ಹೀಗಾಗಿ ಭೌತಶಾಸ್ತ್ರದಲ್ಲಿ ಎಂಎಸ್ಸಿ ಮಾಡುವ ಕನಸು ನನಸಾಗಲಿಲ್ಲ ಎಂದರು.
ಕಂಪ್ಯೂಟರ್ ಸೈನ್ಸ್ ಓದಿ ಅಧ್ಯಾಪಕನಾದೆ, ಕುಲಪತಿಯಾದೆ. ಇದು ನನಗೆ ಎಲ್ಲವನನ್ನೂ ನೀಡಿದೆ. ಹಣ, ಹುದ್ದೆ, ಹೆಸರು ಎಲ್ಲಾ ನೀಡಿದೆ. ಆದರೂ ನನ್ನ ಮನಸ್ಸಲ್ಲಿ ಭೌತಶಾಸ್ತ್ರದ ಬಗ್ಗೆ ವಿಶೇಷ ಪ್ರೀತಿ ಇದೆ. ಖ್ಯಾತ ಪ್ರಾಧ್ಯಾಪಕರು ಈ ವಿಭಾಗದಲ್ಲಿ ಪಾಠ ಮಾಡಿದ್ದಾರೆ. ಸಣ್ಣ ವಿಭಾಗ ಇಂದು ದೊಡ್ಡದಾಗಿ ಬೆಳೆದಿದೆ. ಮಂಗಳೂರು, ಶಿವಮೊಗ್ಗದಿಂದ ಕೂಡ ಇಲ್ಲಿಗೆ ಓದಲು ವಿದ್ಯಾರ್ಥಿಗಳು ಬರುತ್ತಿದ್ದರು ಎಂದು ತಮ್ಮ ಹಳೆ ದಿನಗಳನ್ನು ಮೆಲುಕು ಹಾಕಿದರು.
ಕುಲಸಚಿವ ಪ್ರೊ.ಆರ್.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರೊ.ಎ.ಪಿ.ಜ್ಞಾನ ಪ್ರಕಾಶ್, ಪಿಎಂಇಬಿ ನಿರ್ದೇಶಕ ಪ್ರೊ.ಎನ್.ಕೆ.ಲೋಕನಾಥ್, ಪ್ರೊ. ಶ್ರೀಧರ್ ಸೇರಿದಂತೆ ಇತರರು ಇದ್ದರು.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…