ಮೈಸೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿಯವರು ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್ ಅವರ ಮೇಲಿನ ಆರೋಪ, ಪರೇಶ್ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.
ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದು ವಿವರಿಸಿದರು.
ನಮ್ಮ ಸರ್ಕಾರ ಕಾನೂನು ರೀತ್ಯಾ ನಡೆಯುತ್ತಿರುವ ಕೆಲಸದಲ್ಲಾಗಲಿ, ತನಿಖೆಯಲ್ಲಾಗಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುವ ನಂಬಿಕೆ ಇದೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ. ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ನಮ್ಮ ಪೊಲೀಸರ ಮೇಲೆ ನಂಬಿಕೆ ಇಟ್ಟಿರಬೇಕಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಂಬಬೇಕಲ್ಲವೆ ಎಂದು ಪ್ರಶ್ನಿಸಿದರು.
ಈ ಪ್ರಕರಣದಲ್ಲಿ ನಾನಾಗಲಿ, ಡಿ.ಕೆ.ಶಿವಕುಮಾರ್ ಆಗಲಿ, ಯಾರೂ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ ಎಂದು ತಿಳಿಸಿದರು.
ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ
ರೇವಣ್ಣ ಅವರ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಅವರ ಮೇಲಿನ ಆರೋಪದಲ್ಲಿ ಹುರುಳೇ ಇಲ್ಲದಿದ್ದರೆ ನಿರೀಕ್ಷಣಾ ಜಾಮೀನು ಕೋರಿದ್ದೇಕೆ? ನಿರೀಕ್ಷಣಾ ಜಾಮೀನು ಅರ್ಜಿ ಯಾಕೆ ತಿರಸ್ಕೃತವಾಯಿತು ಎಂದು ಪ್ರಶ್ನಿಸಿದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…