ಮೈಸೂರು

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ: ಸಿದ್ದರಾಮಯ್ಯ

ಮೈಸೂರು: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯವರು ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು.

ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದು ವಿವರಿಸಿದರು.

ನಮ್ಮ ಸರ್ಕಾರ ಕಾನೂನು ರೀತ್ಯಾ ನಡೆಯುತ್ತಿರುವ ಕೆಲಸದಲ್ಲಾಗಲಿ, ತನಿಖೆಯಲ್ಲಾಗಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುವ ನಂಬಿಕೆ ಇದೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ. ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ನಮ್ಮ ಪೊಲೀಸರ ಮೇಲೆ ನಂಬಿಕೆ ಇಟ್ಟಿರಬೇಕಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಂಬಬೇಕಲ್ಲವೆ ಎಂದು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ನಾನಾಗಲಿ, ಡಿ.ಕೆ.ಶಿವಕುಮಾರ್‌ ಆಗಲಿ, ಯಾರೂ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ ಎಂದು ತಿಳಿಸಿದರು.

ರೇವಣ್ಣ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ

ರೇವಣ್ಣ ಅವರ ಬಂಧನದಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಅವರ ಮೇಲಿನ ಆರೋಪದಲ್ಲಿ ಹುರುಳೇ ಇಲ್ಲದಿದ್ದರೆ ನಿರೀಕ್ಷಣಾ ಜಾಮೀನು ಕೋರಿದ್ದೇಕೆ? ನಿರೀಕ್ಷಣಾ ಜಾಮೀನು ಅರ್ಜಿ ಯಾಕೆ ತಿರಸ್ಕೃತವಾಯಿತು ಎಂದು ಪ್ರಶ್ನಿಸಿದರು.

andolana

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago