ಮೈಸೂರು : ಕಾಂಗ್ರೆಸ್ ಪಕ್ಷ ರಾಜ್ಯಕ್ಕೆ ನೀಡಿರುವ ಯೋಜನೆಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ತಿಳಿಸಿದ್ದಾರೆ.
ಬಿಜೆಪಿ ಪಕ್ಷದಿಂದ ಹೊರ ಬಂದ ಬಳಿಕ, ಮಾ.೨೭ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿರುವ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಯಜನೆಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ನೀಡಿರುವ ಬಡವರ, ಮಹಿಳೆಯರ ಹಾಗೂ ಹಿಂದುಳಿದ- ಶೋಷಿತರ ಪರವಾದ ಯೋಜನೆಗಳಿಗೆ ಇನ್ನಷ್ಟು ಪುಷ್ಠಿ ನೀಡುವುದು ನನ್ನ ಆಸೆ ಎಂದರು.
ಅಷ್ಟೇ ಅಲ್ಲದೇ ತವರು ಜಿಲ್ಲೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ʼಕೈʼ ಬಲಪಡಿಸಬೇಕು. ಪಕ್ಷ ಸಂಘಟನೆಗಾಗಿ ಇನ್ನಷ್ಟು ದುಡಿಯುವ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಎಂದು ಅಭಿಪ್ರಾಯ ತಿಳಿಸಿದರು.
ಈ ಬಾರಿ ಮೈಸೂರು -ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಅವರ ಗೆಲುವಗಾಗಿ ಶ್ರಮ ಪಡುವುದಾಗಿ ತಿಳಿಸಿದರು.
ಬಿಎಸ್ವೈ ಪ್ರಶ್ನಾತೀತ ನಾಯಕ : ಬಿ.ಎಸ್.ಯಡೀಯೂರಪ್ಪ ಅವರು ಪಕ್ಷಾತೀತ ಹಾಗೂ ಪ್ರಶ್ನಾತೀತವಾದಂತ ನಾಯಕ. ಯಾವುದೇ ಪಕ್ಷದವರಾದರೂ ಅವರನ್ನು ನಾಯಕರೆಂದು ಒಪ್ಪುತ್ತಾರೆ.
ನಾನು ಸದಾ ಗೌರವಿಸುವ ನಾಯಕರಲ್ಲಿ ಮುಂಚೂಣಿಯಲ್ಲಿ ನಿಂತಿದ್ದ, ನಿಂತಿರುವ ಹಾಗೂ ಸದಾ ನಿಲ್ಲುವ ನಾಯಕ ಯಡಿಯೂರಪ್ಪ ಎಂದು ತಿಳಿಸಿದರು.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…