ಮೈಸೂರು : ಕಾಂಗ್ರೆಸ್ ಪಕ್ಷ ರಾಜ್ಯಕ್ಕೆ ನೀಡಿರುವ ಯೋಜನೆಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ತಿಳಿಸಿದ್ದಾರೆ.
ಬಿಜೆಪಿ ಪಕ್ಷದಿಂದ ಹೊರ ಬಂದ ಬಳಿಕ, ಮಾ.೨೭ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿರುವ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಯಜನೆಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ನೀಡಿರುವ ಬಡವರ, ಮಹಿಳೆಯರ ಹಾಗೂ ಹಿಂದುಳಿದ- ಶೋಷಿತರ ಪರವಾದ ಯೋಜನೆಗಳಿಗೆ ಇನ್ನಷ್ಟು ಪುಷ್ಠಿ ನೀಡುವುದು ನನ್ನ ಆಸೆ ಎಂದರು.
ಅಷ್ಟೇ ಅಲ್ಲದೇ ತವರು ಜಿಲ್ಲೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ʼಕೈʼ ಬಲಪಡಿಸಬೇಕು. ಪಕ್ಷ ಸಂಘಟನೆಗಾಗಿ ಇನ್ನಷ್ಟು ದುಡಿಯುವ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಎಂದು ಅಭಿಪ್ರಾಯ ತಿಳಿಸಿದರು.
ಈ ಬಾರಿ ಮೈಸೂರು -ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಅವರ ಗೆಲುವಗಾಗಿ ಶ್ರಮ ಪಡುವುದಾಗಿ ತಿಳಿಸಿದರು.
ಬಿಎಸ್ವೈ ಪ್ರಶ್ನಾತೀತ ನಾಯಕ : ಬಿ.ಎಸ್.ಯಡೀಯೂರಪ್ಪ ಅವರು ಪಕ್ಷಾತೀತ ಹಾಗೂ ಪ್ರಶ್ನಾತೀತವಾದಂತ ನಾಯಕ. ಯಾವುದೇ ಪಕ್ಷದವರಾದರೂ ಅವರನ್ನು ನಾಯಕರೆಂದು ಒಪ್ಪುತ್ತಾರೆ.
ನಾನು ಸದಾ ಗೌರವಿಸುವ ನಾಯಕರಲ್ಲಿ ಮುಂಚೂಣಿಯಲ್ಲಿ ನಿಂತಿದ್ದ, ನಿಂತಿರುವ ಹಾಗೂ ಸದಾ ನಿಲ್ಲುವ ನಾಯಕ ಯಡಿಯೂರಪ್ಪ ಎಂದು ತಿಳಿಸಿದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…