ಮೈಸೂರು

ಎನ್‌ಡಿಎ ಅಭ್ಯರ್ಥಿಗಾಗಿ ನಾನು ಗೆದ್ದ ಸೀಟನ್ನೇ ಬಿಟ್ಟುಕೊಟ್ಟಿದ್ದೇನೆ: ಸುಮಲತಾ ಅಂಬರೀಶ್‌

ಮೈಸೂರು: ನಾನು ಮಂಡ್ಯ ಹಾಲಿ ಸಂಸದೆಯಾಗಿದ್ದು, ಎನ್‌ಡಿಎ ಅಭ್ಯರ್ಥಿಗೆ(ಮೈತ್ರಿ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ) ನನ್ನ ಸ್ಥಾನ ಬಿಟ್ಟುಕೊಟ್ಟು ಬಿಜೆಪಿ ಸೇರಿದ್ದೇನೆ. ಇದರ ಅರ್ಥ ಮೈತ್ರಿಕೂಟದ ಅಭ್ಯರ್ಥಿಗೆ ನನ್ನ ಸಂಪೂರ್ಣ ಸಹಕಾರ ಇದ್ದಂತೆ ಎಂದಿರುವ ಸಂಸದೆ ಸುಮಲತಾ ಅಂಬರೀಶ್, ಆ ಮೂಲಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತನ್ನ ಬೆಂಬಲವಿದೆ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುವ ಸಂಬಂಧ, ವಾರದ ಹಿಂದೆಯಷ್ಟೇ ಬಿಜೆಪಿ ಸೇರಿದ್ದೇನೆ. ಪಕ್ಷ ನನಗೆ ಎಲ್ಲಿ ಪ್ರಚಾರ ಮಾಡಲು ಹೇಳುತ್ತದೆಯೋ ಅಲ್ಲಿ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದರು.

ನಾನು ಗೆದ್ದಿರುವ ಸೀಟನ್ನು ಮೈತ್ರಿ ಅಭ್ಯರ್ಥಿಗೆ ಬಿಟ್ಟುಕೊಟ್ಟಾಗಲೇ ಸಹಕಾರ ಕೊಟ್ಟಿದ್ದೇನೆ ಎಂದರ್ಥ. ಯಾರೂ ತಾವು ಗೆದ್ದಿರುವ ಸೀಟನ್ನು ಬಿಟ್ಟು ಕೊಡಲ್ಲ. ನಾನು ಬಿಟ್ಟು ಕೊಟ್ಟಿದ್ದೇನೆ. ನಾನು ಯಾವಾಗ ಬಿಜೆಪಿ ಪಕ್ಷ ಸೇರ್ಪಡೆಯಾದೆ, ಆವಾಗಲೇ ಎನ್‌ಡಿಎ ಅಭ್ಯರ್ಥಿ ಪರ ಇದ್ದೇನೆ ಎಂದರ್ಥ ಎಂದು ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯಿಸಿ, ಕಳೆದ ಒಂದು ದಿನದಿಂದ ನಾನು ಈ ವಿಚಾರವನ್ನ ಗಮನಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಫೋಟೋಗಳು ಹರಿದಾಡುತ್ತಿವೆ. ಈಗಾಗಲೇ ಆಕೆಯನ್ನು ಹತ್ಯೆ ಮಾಡಲಾಗಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಚಾರಿತ್ರ್ಯವನ್ನು ಹತ್ಯೆ ಮಾಡುತ್ತಿರುವುದು ನೋವಿನ ಸಂಗತಿ ಎಂದು ವಿಷಾಧ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

4 mins ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

23 mins ago

ನಾಗರಹೊಳೆ | ಅಕ್ರಮ ಉರುಳಿಗೆ ಸಿಲುಕಿ ಹುಲಿ ಬಲಿ

ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…

30 mins ago

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

1 hour ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

1 hour ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

4 hours ago