ಮೈಸೂರು

ಅಧಿಕಾರಿಗಳನ್ನು ಎಚ್ಚರಿಸಲೆಂದೆ ಪಾದಯಾತ್ರೆ ಕೈಗೊಂಡಿದ್ದೇನೆ: ಶಾಸಕ ಹರೀಶ್ ಗೌಡ

ಮೈಸೂರು: ಎಷ್ಟೋ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಗಮನಕ್ಕೆ ತಂದು ಹೇಳಿದ್ದರೂ ಸಮಸ್ಯೆ ಬಗೆಹರಿದಿರುವುದಿಲ್ಲ. ಅಂತ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡುವುದಕ್ಕಾಗಿಯೇ ಪಾದಯಾತ್ರೆ ನಡೆಸುತ್ತಿರುವುದಾಗಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ತಿಳಿಸಿದರು.

ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಅವರು “ಜನರ ಮನೆ ಬಾಗಿಲಿಗೆ ಶಾಸಕರು” ಎಂಬ ವಿನೂತನ ಹೆಸರಿನಡಿಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ಸಂ. 5 -ಕುಂಬಾರಕೊಪ್ಪಲು ಶ್ರೀ ಆದಿಶಕ್ತಿ ದೇವಾಲಯದಿಂದ ಮುಂಜಾನೆಯೇ ಪಾದಯಾತ್ರೆ ಪ್ರಾರಂಭಿಸಿ ಅವರು ಮಾತನಾಡಿದರು.

ರಸ್ತೆ, ಯುಜಿಡಿ, ಒಳಚರಂಡಿ, ಉದ್ಯಾನವನ, ಕುಡಿಯುವ ನೀರು, ಖಾತೆ, ಕಂದಾಯ, ಸ್ವಚ್ಛತೆ, ಪಿಂಚಣಿ ಹಾಗೂ ಇನ್ನತರೆ ಅನೇಕ ಸಮಸ್ಯೆಗಳನ್ನು ಜನರ ಮನೆ ಬಾಗಿಲಿಗೆ ತೆರಳಿ ಆಲಿಸುವುದಾಗಿ ಪಾದಯಾತ್ರೆ ಮಾಡುತ್ತಿದ್ದೇನೆ. ಸಾಕಷ್ಟು ಸಮಸ್ಯೆಗಳನ್ನು ಸ್ಥಳದಲ್ಲೇ ನಿವಾರಿಸುವ ಕೆಲಸವನ್ನು ಸಹ ಮಾಡಲಾಗುತ್ತಿದೆ. ಆದರೆ, ಈ ಹಿಂದೆಯೂ ಅನೇಕ ಮಂದಿ ಅರ್ಜಿ ಕೊಟ್ಟಿದ್ದಾರೆ. ಅನೇಕ ಮುಖಂಡರು, ಬ್ಲಾಕ್ ಅಧ್ಯಕ್ಷರ ಮುಖೇನ ಮನವಿ ಸಲ್ಲಿಸಿದ್ದಾರೆ. ಇದಾದ ಬಳಿಕ ನಾವು ಸೂಚಿಸಿದ ಬಳಿಕ ಸಮಸ್ಯೆ ಇತ್ಯರ್ಥ ಆಗಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿರುವುದಿಲ್ಲ. ಪಾದಯಾತ್ರೆ ವೇಳೆ ಜನತೆ ನೇರವಾಗಿ ಈ ಹಿಂದೆ ಮನವಿ ಮಾಡಿದ್ದರೂ ಅಧಿಕಾರಿಗಳು ಸಮಸ್ಯೆ ಬಗೆಹರಿಸದಿರುವ ಬಗ್ಗೆ ಹೇಳಿಕೊಂಡಾಗ ಆಗ ಅಧಿಕಾರಿಗಳಿಗೆ ಸಮಸ್ಯೆ ಇತ್ಯರ್ಥ ಕ್ಕೆ ಎಚ್ಚರಿಕೆ ನೀಡಲು ಪಾದಯಾತ್ರೆಯಿಂದ ಮಾತ್ರ ಸಾಧ್ಯ ಎಂದು ನಿರ್ಧರಿಸಿ ಪಾದಯಾತ್ರೆ ಮಾಡಲಾಗುತ್ತಿದೆ ಎಂದರು.

ಇನ್ನೂ ಸಾಕಷ್ಟು ಸಮಸ್ಯೆಗಳಿರುವ ಕಾರಣಕ್ಕಾಗಿ ಪಾಲಿಕೆ ಅಧಿಕಾರಿಗಳು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಚೆಸ್ಕಾಂ, ಕೆ.ಎಸ್.ಆರ್.ಟಿ.ಸಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕಂದಾಯ ಅಧಿಕಾರಿಗಳ ಜತೆಗೂಡಿ ಪಾದಯಾತ್ರೆ ನಡೆಸುತ್ತಿದ್ದೇನೆ. ಅನೇಕರಿಗೆ ನನ್ನನ್ನು ಖುದ್ದು ಭೇಟಿ ಮಾಡಲು ಅಥವಾ ನನ್ನ ಕಚೇರಿಗೆ ಬಂದು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಆಗದಿರಬಹುದು. ಅಂತಹವರ ಮನೆ ಬಾಗಿಲಿಗೆ ತೆರಳಿ ಸಮಸ್ಯೆ ಆಲಿಸುವ ಕೆಲಸ ಪ್ರಮುಖವಾಗಿ ಮಾಡುವ ಉದ್ದೇಶದಿಂದ ಪಾದಯಾತ್ರೆ ನಡೆಸುತ್ತಿದ್ದೇನೆ. ಮಾತ್ರವಲ್ಲದೆ, ವಾರ್ಡ್ ನ ಪ್ರಮುಖ ಸ್ಥಳದಲ್ಲಿ ಬೆಳಿಗ್ಗೆ ಪಾದಯಾತ್ರೆ ಹಾಗೂ ಜನ ಸಂಪರ್ಕ ಸಭೆ ನಡೆಸಿ ಸಮಸ್ಯೆ ಇತ್ಯರ್ಥಕ್ಕೆ ಸಾಕಷ್ಟು ಪ್ರಯತ್ನ ಮಾಡಲಾಗುವುದು. ಸದರಿ ಪಾದಯಾತ್ರೆ ಪ್ರತಿ ವಾರ ಒಂದೊಂದು ವಾರ್ಡ್ ನಲ್ಲಿ ನಡೆಸಲು ಉದ್ದೇಶಿಸಿರುತ್ತೇನೆ. ಪಕ್ಷಾತೀತವಾಗಿ ಜನರು ಸಮಸ್ಯೆ ಹೇಳಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಇನ್ನೂ ಕ್ಷೇತ್ರದಲ್ಲಿ ಆಗಿರುವ ಕಾಮಗಾರಿ ಹಾಗೂ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡುವ ನಿಟ್ಟಿನಲ್ಲಿಯೂ ಪಾದಯಾತ್ರೆ ವೇಳೆ ಪರಿಶೀಲನೆ ಮಾಡುತ್ತಿರುವುದಾಗಿ ಹೇಳಿದರು.

ಕುಂಬಾರಕೊಪ್ಪಲಿನ ಕಾವೇರಿ ಬಡಾವಣೆ, 60 ಅಡಿ ರಸ್ತೆ, ಬಸ್ಸ ಬೀದಿ ಮುಖ್ಯ ರಸ್ತೆ, ಲಾರಿ ಬೈರಪ್ಪನವರ ಮನೆ ರಸ್ತೆ ಬೆಳ್ಳಗ್ಗೆ ಪಾದಯಾತ್ರೆ ನಡೆಸಿದರು. ಸಂಜೆ ಕುಂಬಾರ ಕೊಪ್ಪಲು ಕ್ರೀಡಾಂಗಣ, ಕುಂಬಾರಕೊಪ್ಪಲು ಕಾಲೋನಿ ಹಾಗೂ ಮಹದೇಶ್ವರ ದೇವಾಲಯದಲ್ಲಿ ಜನಸಂಪರ್ಕ ಸಭೆ ನಡೆಸಿ ಪ್ರತಿಯೊಬ್ಬರ ಸಮಸ್ಯೆಯನ್ನು ಖುದ್ದು ಆಲಿಸಿದರು.

ಪಾದಯಾತ್ರೆಯಲ್ಲಿ ನಗರಪಾಲಿಕೆ ಆಯುಕ್ತರು ಹಾಗೂ ಪ್ರಮುಖ ಇಲಾಖೆಯ ಅಧಿಕಾರಿಗಳು ಹಾಗೂ ಚಾಮರಾಜ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago