ಮೈಸೂರು

ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ : ಸಿಎಂ

ಮೈಸೂರು : ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

*ಕರ್ನಾಟಕ ಜಾತ್ಯಾತೀತ ರಾಜ್ಯ*
ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು.ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.

ಇದನ್ನು ಓದಿ :  ಮಂಡ್ಯ| ನಾಪತ್ತೆಯಾಗಿದ್ದ ಅಧಿಕಾರಿಯ ಶವ ಪತ್ತೆ

ದಸರಾ ಉದ್ಘಾಟನೆ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂತೋಷದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

*ವಿರೋಧಪಕ್ಷಗಳು ಭವಿಷ್ಯಕಾರರಲ್ಲ*
ದಸರಾವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷಗಳು ಭವಿಷ್ಯ ನುಡಿದಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿ, ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು , ಬಜೆಟ್ ಮಂಡಿಸಲು ಸಾಧ್ಯವಿಲ್ಲ ವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.

ಸರ್ಕಾರಿ ನೌಕರರ ತುಟ್ಟಿಭತ್ಯ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago