ಮೈಸೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಮಾಡೋಕೆ ಆಗುತ್ತಾ?. ಕರ್ನಾಟಕದ 4 ಜಲಾಶಯ ಕಟ್ಟೋಕೆ ಕೇಂದ್ರದಿಂದ ಹಣ ಕೊಟ್ಟಿಲ್ಲ. ಕರ್ನಾಟಕದ ಜಲಾಶಯವನ್ನು ಕರ್ನಾಟಕದವರೇ ಕಟ್ಟಿರೋದು. ಕಾವೇರಿ ನೀರು ವಿಚಾರವಾಗಿ ಸರ್ವಪಕ್ಷಗಳ ಸಭೆ ನಡೆಸುವುದನ್ನು ಬಿಟ್ಟು, ಸ್ಟಾಲಿನ್ ಹತ್ತಿರ ಹೋಗಿ ಚರ್ಚೆ ಮಾಡಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ(ಜು.28) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮಿಳುನಾಡಿನವರು 1 ಟಿಎಂಸಿ ನೀರು ಕೇಳಿದ್ದರು. ಮಳೆಬಂದು ಹೆಚ್ಚು ನೀರು ಹೋಗ್ತಾ ಇದೆ.
ಈ ವಿಚಾರಕ್ಕೆ ಟೆಕ್ನಿಕಲ್ ಆಗಿ ಚರ್ಚೆ ಮಾಡಿದರೆ ಒಳ್ಳೆಯದು ಎಂದು ಹೇಳಿದರು.
ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ಎಚ್ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದು, ನಾನು ಈ ಹಿಂದೆ ಸಿಎಂ ಆಗಿ, ಇದೀಗ ಕೇಂದ್ರ ಸಚಿವನಾಗಿ ಸ್ವಲ್ಪ ಅನುಭವ ಪಡೆದಿದ್ದೇನೆ. ನಾನು ಸಿಎಂ ಆಗಿದ್ದಾಗ ಕೊಡಗಿನಲ್ಲಿ ಭೀಕರ ಪ್ರವಾಹ ಬಂತು. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿತು. ಸ್ವತಃ ಪ್ರಧಾನಿಯವರೇ ಕರೆ ಮಾಡಿ ಮಾಹಿತಿ ಪಡೆದುಕೊಂಡರು. ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದರು ಎಂದು ತಿರುಗೇಟು ನೀಡಿದರು.
ಕೇಂದ್ರದ ಜೊತೆ ಯಾವಾಗಲೂ ಗುದ್ದಾಡುವ ನೀವು ಅಂತಹ ವಾತಾವರಣವನ್ನೇಕೆ ಸೃಷ್ಟಿಸಿಕೊಂಡಿಲ್ಲ. ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ಏಕೆ ದೂರುತ್ತೀರಿ?. ರಾಜ್ಯದ ಸಂಸದರ ಮೇಲೆ ಏಕೆ ಆರೋಪಗಳನ್ನು ಮಾಡುತ್ತೀರಿ?. ಹಾಗಾದರೆ ರಾಜ್ಯ ಸರ್ಕಾರದ ಕೆಲಸವಾದರೂ ಏನು? ನೀವು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕೇಂದ್ರದ ಮುಂದೆ ಸಮರ್ಥವಾಗಿ ಇಡಬೇಕು. ಅದು ಬಿಟ್ಟು ಎಲ್ಲದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡೋದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…