ಮೈಸೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಮಾಡೋಕೆ ಆಗುತ್ತಾ?. ಕರ್ನಾಟಕದ 4 ಜಲಾಶಯ ಕಟ್ಟೋಕೆ ಕೇಂದ್ರದಿಂದ ಹಣ ಕೊಟ್ಟಿಲ್ಲ. ಕರ್ನಾಟಕದ ಜಲಾಶಯವನ್ನು ಕರ್ನಾಟಕದವರೇ ಕಟ್ಟಿರೋದು. ಕಾವೇರಿ ನೀರು ವಿಚಾರವಾಗಿ ಸರ್ವಪಕ್ಷಗಳ ಸಭೆ ನಡೆಸುವುದನ್ನು ಬಿಟ್ಟು, ಸ್ಟಾಲಿನ್ ಹತ್ತಿರ ಹೋಗಿ ಚರ್ಚೆ ಮಾಡಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ(ಜು.28) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮಿಳುನಾಡಿನವರು 1 ಟಿಎಂಸಿ ನೀರು ಕೇಳಿದ್ದರು. ಮಳೆಬಂದು ಹೆಚ್ಚು ನೀರು ಹೋಗ್ತಾ ಇದೆ.
ಈ ವಿಚಾರಕ್ಕೆ ಟೆಕ್ನಿಕಲ್ ಆಗಿ ಚರ್ಚೆ ಮಾಡಿದರೆ ಒಳ್ಳೆಯದು ಎಂದು ಹೇಳಿದರು.
ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ಎಚ್ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದು, ನಾನು ಈ ಹಿಂದೆ ಸಿಎಂ ಆಗಿ, ಇದೀಗ ಕೇಂದ್ರ ಸಚಿವನಾಗಿ ಸ್ವಲ್ಪ ಅನುಭವ ಪಡೆದಿದ್ದೇನೆ. ನಾನು ಸಿಎಂ ಆಗಿದ್ದಾಗ ಕೊಡಗಿನಲ್ಲಿ ಭೀಕರ ಪ್ರವಾಹ ಬಂತು. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿತು. ಸ್ವತಃ ಪ್ರಧಾನಿಯವರೇ ಕರೆ ಮಾಡಿ ಮಾಹಿತಿ ಪಡೆದುಕೊಂಡರು. ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದರು ಎಂದು ತಿರುಗೇಟು ನೀಡಿದರು.
ಕೇಂದ್ರದ ಜೊತೆ ಯಾವಾಗಲೂ ಗುದ್ದಾಡುವ ನೀವು ಅಂತಹ ವಾತಾವರಣವನ್ನೇಕೆ ಸೃಷ್ಟಿಸಿಕೊಂಡಿಲ್ಲ. ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ಏಕೆ ದೂರುತ್ತೀರಿ?. ರಾಜ್ಯದ ಸಂಸದರ ಮೇಲೆ ಏಕೆ ಆರೋಪಗಳನ್ನು ಮಾಡುತ್ತೀರಿ?. ಹಾಗಾದರೆ ರಾಜ್ಯ ಸರ್ಕಾರದ ಕೆಲಸವಾದರೂ ಏನು? ನೀವು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕೇಂದ್ರದ ಮುಂದೆ ಸಮರ್ಥವಾಗಿ ಇಡಬೇಕು. ಅದು ಬಿಟ್ಟು ಎಲ್ಲದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡೋದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…
ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…
ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…
ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…
ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…