ಮೈಸೂರು : ಕುಮಾರಸ್ವಾಮಿ ಆರೋಪಗಳಿಗೆ, ಟೀಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಡಿ.ಕೆ ಶಿವಕುಮಾರ್ಗೆ ಈಗ ಚನ್ನಪಟ್ಟಣ ನೆನಪಾಯಿತಾ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ ಕೆ ಸುರೇಶ್ ಸಂಸದರಾಗಿದ್ದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ತುಂಬಾ ಚೆನ್ನಾಗಿ ಅಭಿವೃದ್ಧಿ ಮಾಡಿದ್ದಾರೆ. ಚುನಾವಣೆ ಬಂದಾಗ ತಂತ್ರಗಾರಿಕೆ ಸಾಮಾನ್ಯ. ಉಪ ಚುನಾವಣೆಗೆ ತಂತ್ರಗಾರಿಕೆ ಮಾಡುತ್ತೇವೆ ಎಂದರು.
ಎಲ್ಲೆಲ್ಲಿ ಬೈ ಎಲೆಕ್ಷನ್ ನಡೆಯುತ್ತಿದೆಯೋ ಅಲ್ಲಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಕ್ಷೇತ್ರದ ಮತದಾರರ ಅಭಿಪ್ರಾಯ ಸಂಗ್ರಹ ಮಾಡುತ್ತಾರೆ. ಬೈ ಎಲೆಕ್ಷನ್ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಮೂರು ಕ್ಷೇತ್ರಗಳನ್ನೂ ಗೆಲ್ಲಲೇಬೇಕೆಂಬುದು ನಮ್ಮ ಗುರಿಯಾಗಿದೆ. ಗೆಲ್ಲುವ ಅಭ್ಯರ್ಥಿಗಳು ಯಾರು ಎಂಬುದು ಇಲ್ಲಿ ಮುಖ್ಯವಲ್ಲ. ಜನರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…