ಮೈಸೂರು: ಐಸಿಸಿ ಚಾಂಪಿಯನ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಇಂದು(ಮಾರ್ಚ್.9) ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಐಸಿಸಿ ಟ್ರೋಫಿಗಾಗಿ ಹೈವೋಲ್ಟೇಜ್ ಪಂದ್ಯ ನಡೆಯಿತು. 25 ವರ್ಷಗಳ ನಂತರ ಇವೆರಡು ತಂಡಗಳು ಫೈನಲ್ ಮುಖಾಮುಖಿಯಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳಿಗಿಂದು ಸೂಪರ್ ಸಂಡೇಯಾಗಿದೆ.
ಇನ್ನು ಈ ಚಾಂಪಿಯನ್ಸ್ ಟ್ರೋಫಿ ಪಂದ್ಯ ವೀಕ್ಷಿಸಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಅಲ್ಲದೇ ಮೈಸೂರಿನಲ್ಲಿ ಅಭಿಮಾನಿಗಳು ದೇವ ಮೊರೆ ಹೋಗಿದ್ದು, ಅಗ್ರಹಾರದ 101 ಗಣಪತಿ ದೇವಾಲಯದಲ್ಲಿ 101 ಈಡುಗಾಯಿ ಹೊಡೆದು ಹರಕೆ ಪೂರೈಸಿದ್ದಾರೆ.
ಈ ವೇಳೆ ಅಭಿಮಾನಿಗಳು ಟೀಂ ಇಂಡಿಯಾ ಆಟಗಾರರ ಪೋಸ್ಟರ್ ಹಿಡಿದು ಘೋಷಣೆ ಕೂಗಿದ್ದು, ಟೀಂ ಇಂಡಿಯಾ ಆಟಗಾರರಿಗೆ ಶಕ್ತಿ ನೀಡುವಂತೆ ವಿಘ್ನ ನಿವಾರಕನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…