ಮೈಸೂರು: ಐಸಿಸಿ ಚಾಂಪಿಯನ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಇಂದು(ಮಾರ್ಚ್.9) ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಐಸಿಸಿ ಟ್ರೋಫಿಗಾಗಿ ಹೈವೋಲ್ಟೇಜ್ ಪಂದ್ಯ ನಡೆಯಿತು. 25 ವರ್ಷಗಳ ನಂತರ ಇವೆರಡು ತಂಡಗಳು ಫೈನಲ್ ಮುಖಾಮುಖಿಯಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳಿಗಿಂದು ಸೂಪರ್ ಸಂಡೇಯಾಗಿದೆ.
ಇನ್ನು ಈ ಚಾಂಪಿಯನ್ಸ್ ಟ್ರೋಫಿ ಪಂದ್ಯ ವೀಕ್ಷಿಸಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಅಲ್ಲದೇ ಮೈಸೂರಿನಲ್ಲಿ ಅಭಿಮಾನಿಗಳು ದೇವ ಮೊರೆ ಹೋಗಿದ್ದು, ಅಗ್ರಹಾರದ 101 ಗಣಪತಿ ದೇವಾಲಯದಲ್ಲಿ 101 ಈಡುಗಾಯಿ ಹೊಡೆದು ಹರಕೆ ಪೂರೈಸಿದ್ದಾರೆ.
ಈ ವೇಳೆ ಅಭಿಮಾನಿಗಳು ಟೀಂ ಇಂಡಿಯಾ ಆಟಗಾರರ ಪೋಸ್ಟರ್ ಹಿಡಿದು ಘೋಷಣೆ ಕೂಗಿದ್ದು, ಟೀಂ ಇಂಡಿಯಾ ಆಟಗಾರರಿಗೆ ಶಕ್ತಿ ನೀಡುವಂತೆ ವಿಘ್ನ ನಿವಾರಕನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…