ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.
ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು: ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು.
ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…