ಮೈಸೂರು

ರಾಜ್ಯದಲ್ಲೂ ಪಾಕ್‌ ಪ್ರಜೆಗಳ ತಪಾಸಣೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.

ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು: ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು.

ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

56 mins ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

1 hour ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

5 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

10 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

10 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

10 hours ago