ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.
ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು: ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು.
ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…